Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸಸಿಂಹ ವಿಷ್ಣುವರ್ಧನ್ 'ಖೈದಿ' ರೀ ರಿಲೀಸ್
ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ 'ಖೈದಿ' ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಚಿತ್ರ ಬಿಡುಗಡೆಯಾಗಿ ಇಪ್ಪತ್ತೊಂಬತ್ತು ವರ್ಷಗಳೇ ಉರುಳಿ ಹೋಗಿವೆ. ಈಗ ಮತ್ತೆ ಅಭಿಮಾನಿಗಳ ಒತ್ತಾಯ ಮೇರೆಗೆ ಚಿತ್ರದನ್ನು ಪುನಃ ಬಿಡುಗಡೆ ಮಾಡಲಾಗುತ್ತಿದೆ.
ಬೆಂಗಳೂರಿನ ಅಪರ್ಣಾ ಚಿತ್ರಮಂದಿರದಲ್ಲಿ ನವೆಂಬರ್ 15ರಂದು ಖೈದಿ ಚಿತ್ರ ಬಿಡುಗಡೆಯಾಗುತ್ತಿದೆ. ಕೆಎಸ್ ಆರ್ ದಾಸ್ ನಿರ್ದೇಶನದ ಈ ಚಿತ್ರವನ್ನು ಜಿಆರ್ ಕೆ ರಾಜು ಅವರು ವಿಶ್ವಚಿತ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದರು. ಚಿತ್ರ ಬಿಡುಗಡೆ ಕಂಡಿದ್ದು 1984ರಲ್ಲಿ.
ತೆಲುಗಿನ 'ಖೈದಿ' ಚಿತ್ರದ ರೀಮೇಕ್ ಇದು. ಮೂಲ ಚಿತ್ರದಲ್ಲಿ ಚಿರಂಜೀವಿ ಹಾಗೂ ಮಾಧವಿ ಮುಖ್ಯ ಪಾತ್ರಧಾರಿಗಳು. ಈ ಚಿತ್ರದ "ತಾಳೆ ಹೂವ ಪೊದೆಯಿಂದ..." (ಚಿ.ಉದಯಶಂಕರ್ ಸಾಹಿತ್ಯ) ಹಾಡು ಆಗಿನ ಕಾಲಕ್ಕೆ ಬುಸ್ ಬುಸ್ ಎಂದು ಸಾಕಷ್ಟು ಸದ್ದು ಮಾಡಿತ್ತು.
ಚಕ್ರವರ್ತಿ ಸಂಗೀತ, ವಿ ಲಕ್ಷ್ಮಣ್ ಅವರ ಛಾಯಾಗ್ರಹಣ, ಡಿ ವೆಂಕಟರತ್ನಂ ಅವರ ಸಂಕಲನ, ಚಿನ್ನಿ ಪ್ರಕಾಶ್ ಮತ್ತು ತಾರಾ ಅವರ ನೃತ್ಯ ಸಂಯೋಜನೆ, ನಾಗರಾಜ್ ಅವರ ಕಲೆ ಇರುವ ಚಿತ್ರವನ್ನು ಡಿವಿ ಸುಧೀಂದ್ರ ಅವರು ಪ್ರಚಾರ ಮಾಡಿದ್ದರು. ಈಗ ಮತ್ತೊಂದು ಬೆಳ್ಳಿತೆರೆಯ ಮೇಲೆ ವೀಕ್ಷಿಸುವ ಅವಕಾಶ. (ಒನ್ಇಂಡಿಯಾ ಕನ್ನಡ)