ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೆ ಕೊನೆಗೂ ಕೂಡಿ ಬಂತು ಕಾಲ

ಸಾಹಸ ಸಿಂಹನ ಅಸಂಖ್ಯಾತ ಅಭಿಮಾನಿಗಳ ಆಸೆ ಈಡೇರುವ ಸಮಯ ಹತ್ತಿರ ಬಂದಿದೆ. ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಸಮೀಪದಲ್ಲಿ ನಿರ್ಮಾಣವಾಗಿರುವ ಡಾ. ವಿಷ್ಣುವರ್ಧನ್ ಭವ್ಯ ಸ್ಮಾರಕ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 29ರಂದು ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. 11 ಕೋಟಿ ವೆಚ್ಚದಲ್ಲಿ ಸುಂದರವಾದ ಸ್ಮಾರಕ ನಿರ್ಮಾಣವಾಗಿದೆ.

ಸುಮಾರು ಎರಡು ಮುಕ್ಕಾಲು ಎಕರೆ ಜಾಗದಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತಲೆ ಎತ್ತಿದೆ. ದಾದಾಗೆ ಸಂಬಂಧಿಸಿದ ಫೋಟೊ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ ಹೀಗೆ ಹತ್ತು ಹಲವು ವಿಶೇಷಗಳನ್ನು ಈ ಸ್ಮಾರಕ ಒಳಗೊಂಡಿದೆ. ಈಗಾಗಲೇ ಸ್ಮಾರಕ ನಿರ್ಮಾಣದ ಬಹುತೇಕ ಕೆಲಸ ಪೂರ್ಣಗೊಂಡಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಳೆದ ತಿಂಗಳೇ ಸ್ಮಾರಕ ಲೋಕಾರ್ಪಣೆ ಆಗಬೇಕಿತ್ತು. ವಿಷ್ಣು ಪುಣ್ಯಸ್ಮರಣೆ ದಿನ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಅಂತು ಇಂತೂ ಸರ್ಕಾರ ವಿಷ್ಣವರ್ಧನ್ ಸ್ಮಾರಕ ಉದ್ಘಾಟನೆಗೆ ಸಿದ್ಧತೆ ನಡೆಸಿದೆ.

ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಎನ್ನುವುದು ಸಾಕಷ್ಟು ಅಭಿಮಾನಿಗಳ ಆಸೆ ಆಗಿದೆ. ಆದರೆ ದಾದಾ ಕುಟುಂಬಸ್ಥರ ಆಸೆಯಂತೆ ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಸಮೀಪದಲ್ಲಿ ಸ್ಮಾರಕ ರೂಪ ತಳೆದಿದೆ.

ಸರ್ಕಾರದಿಂದ ಉದ್ಘಾಟನೆ ಕಾರ್ಯಕ್ರಮ

ಸರ್ಕಾರದಿಂದ ಉದ್ಘಾಟನೆ ಕಾರ್ಯಕ್ರಮ

2009 ಡಿಸೆಂಬರ್ 30ರಂದು ಸಾಹಸ ಸಿಂಹ ವಿಷ್ಣುವರ್ಧನ್ ನಿಧನರಾಗಿದ್ದರು. ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದೀಗ ಬರೋಬ್ಬರಿ 12 ವರ್ಷಗಳ ನಂತರ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಆಗಿದೆ. ಜನವರಿ 29ರಂದು ನಡೆಯುವ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡ ಭಾಗಿ ಆಗಲಿದ್ದಾರೆ. ಈ ಬಗ್ಗೆ ಸಿಎಂ ಕಛೇರಿಯಿಂದ ಮಾಹಿತಿ ಸಿಕ್ಕಿದೆ. ವಿಷ್ಣು ಕುಟುಂಬ ಸದಸ್ಯರ ಜೊತೆಗೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಮುಖಂಡರು ಹಾಜರಾಗಲಿದ್ದಾರೆ.

ಸೆ.15, 2020ರಲ್ಲಿ ಭೂಮಿಪೂಜೆ

ಸೆ.15, 2020ರಲ್ಲಿ ಭೂಮಿಪೂಜೆ

ಬೆಂಗಳೂರಿನ ಎಂ9 ಕಂಪೆನಿಯ ನಿಶ್ಚಲ್ ವಿಷ್ಣು ಸ್ಮಾರಕಕ್ಕೆ ರೂಪುರೇಷೆ ಸಿದ್ಧಪಡಿಸಿದ್ದರು. ಸೆಪ್ಟೆಂಬರ್ 15, 2020ರಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಕಾರಣಾಂತರಗಳಿಂದ ಸ್ಮಾರಕ ನಿರ್ಮಾಣ ಕೆಲಸ ತಡವಾಗಿತ್ತು. ಕೊನೆಗೂ ವಿಷ್ಣು ಕುಟುಂಬಸ್ಥರ ಆಸೆಯಂತೆ ಸ್ಮಾರಕ ಎದ್ದು ನಿಂತಿದೆ. ಇದೀಗ ಸ್ಮಾರಕ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಸ್ಮಾರಕ ಉದ್ಘಾಟನೆ ವಿಚಾರ ಅಭಿಮಾನಿಗಳಿಗೆ ಸಂತಸ ತಂದಿದೆ.

ವಿಷ್ಣು ಸ್ಮಾರಕದ ವಿಶೇಷತೆಗಳು

ವಿಷ್ಣು ಸ್ಮಾರಕದ ವಿಶೇಷತೆಗಳು

ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ 6 ಅಡಿ ಎತ್ತರದ ವಿಷ್ಣು ಪುತ್ಥಳಿಯಲ್ಲಿ ಕೆತ್ತನೆ ಮಾಡಿದ್ದು, ಅದನ್ನು ಸ್ಮಾರಕದ ಮಧ್ಯದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಇನ್ನು ಅದರ ಸುತ್ತಲೂ ವೃತ್ತಾಕಾರದ ಫೋಟೊ ಗ್ಯಾಲರಿ ಇರಲಿದೆ. ಇಲ್ಲಿ ದಾದಾನ ಅಪರೂಪದ ಭಾವಚಿತ್ರಗಳನ್ನು ಹಾಕಲಾಗುತ್ತದೆ. ಇನ್ನು ನಾಟಕ, ಸಿನಿಮಾ ಪ್ರದರ್ಶನಕ್ಕೆ ಹವಾ ನಿಯಂತ್ರಿತ ಆಡಿಟೋರಿಯಂ, ಡೆಸ್ಸಿಂಗ್ ರೂಂಗಳು, ಸುಸಜ್ಜಿತ ಶೌಚಾಲಯ, ವಾಹಗಳ ಪಾರ್ಕಿಂಗ್, ಕ್ಲಾಸ್‌ ರೂಮ್‌ಗಳು, ಕ್ಯಾಂಟೀನ್, ಸುಂದರವಾದ ನೀರಿನ ಕಾರಂಜಿ, ಉದ್ಯಾನವನ ಎಲ್ಲವೂ ಸ್ಮಾರಕದಲ್ಲಿ ಇರಲಿದೆ.

ಅಭಿಮಾನಿಗಳಿಗೂ ಆಹ್ವಾನ

ಅಭಿಮಾನಿಗಳಿಗೂ ಆಹ್ವಾನ

ದಶಕದ ಹೋರಾಟದ ಫಲವಾಗಿ ವಿಷ್ಣುವರ್ಧನ್ ಹುಟ್ಟೂರಿನಲ್ಲೇ ಸ್ಮಾರಕ ನಿರ್ಮಾಣವಾಗಿದೆ. ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ಉದ್ದೇಶಿಸಿತ್ತು. ಆದರೆ ಜಾಗದ ತಗಾದೆಯಿಂದ ಅದು ಸಾಧ್ಯವಾಗಲೇ ಇಲ್ಲ. ಕಾದು ಕಾದು ಸುಸ್ತಾಗಿ ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಒಟ್ನಲ್ಲಿ ಕೊನೆಗೂ ಸ್ಮಾರಕ ನಿರ್ಮಾಣವಾಗಿದ್ದು, ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಆಗಿ ಎಂದು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸ್ವಾಗತಿಸಿದ್ದಾರೆ.

More from Filmibeat

English summary
Dr Vishnuvardhan memorial at Mysuru will be inaugurated on January 29; Know Specialities. it has been decided to inaugurate it in a grand-scale. Know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X