Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಷ್ಣು ದಾದಾ'ನ 8ನೇ ಪುಣ್ಯ ಸ್ಮರಣೆ: ಅಭಿಮಾನಿಗಳ ಮನದಲ್ಲಿ 'ಯಜಮಾನ' ಚಿರಾಯು
Recommended Video
ಅದು ಡಿಸೆಂಬರ್ 30, 2009.. 'ಸಾಹಸ ಸಿಂಹ'ನ ಘರ್ಜನೆ ನಿಶ್ಯಬ್ಧ ಆದ ದಿನ. ಹೊಸ ವರ್ಷದ ಹೊಸ್ತಿಲಲ್ಲಿ ಇದ್ದ ಕರುನಾಡ ಮಹಾ ಜನತೆಗೆ ಬರ ಸಿಡಿಲು ಬಡಿದ ದಿನ. ಅಭಿಮಾನಿಗಳ ಪ್ರೀತಿಯ 'ಯಜಮಾನ' ಅಸ್ತಂಗತ ಆದ ದಿನ. ಇಡೀ ಚಂದನವನ ದುಃಖದ ಮಡುವಿನಲ್ಲಿ ಮುಳುಗಿದ ದಿನ. ಆ ಕಹಿ ದಿನ ಕಳೆದು ಇಂದಿಗೆ ಎಂಟು ವರ್ಷಗಳು ಸಂದಿವೆ.
ಹೌದು, ಡಾ.ವಿಷ್ಣುವರ್ಧನ್ ರವರು ನಮ್ಮನ್ನೆಲ್ಲ ಅಗಲಿ ಇಂದಿಗೆ 8 ವರ್ಷಗಳು ಉರುಳಿವೆ. 'ಹೃದಯವಂತ'ನ ಎಂಟನೇ ವರ್ಷದ ಪುಣ್ಯಸ್ಮರಣೆಯನ್ನ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಮಾಡುತ್ತಿದ್ದಾರೆ.
ಡಾ.ವಿಷ್ಣುವರ್ಧನ್ ರವರ ಎಂಟನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ, ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳ ವತಿಯಿಂದ ಅನ್ನದಾನ ಹಾಗೂ ರಕ್ತದಾನ ನಡೆಯುತ್ತಿದೆ.
ಎಕ್ಸ್ ಕ್ಲೂಸಿವ್ ಸಂದರ್ಶನ: ಡಾ.ವಿಷ್ಣು ಸ್ಮಾರಕಕ್ಕೆ ಭೂಮಿ ನೀಡಲು ಮುಂದಾದ ಕಿರುತೆರೆ ನಟ
ಪುಣ್ಯಸ್ಮರಣೆ ನಿಮಿತ್ತ ಡಾ.ವಿಷ್ಣುವರ್ಧನ್ ರವರ ಸಮಾಧಿಯನ್ನ ವಿವಿಧ ಹೂವುಗಳಿಂದ ಅಲಂಕರಿಸಿ ಇಂದು ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಸಾವಿರಾರು ಅಭಿಮಾನಿಗಳು ಇಂದು ಅಭಿಮಾನ್ ಸ್ಟುಡಿಯೋಗೆ ಆಗಮಿಸಿ, ಡಾ.ವಿಷ್ಣುವರ್ಧನ್ ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ಡಾ.ವಿಷ್ಣು ಸ್ಮಾರಕ ವಿವಾದ ಬಗೆಹರಿಸಲು ಸುದೀಪ್ ನೀಡಿದ 4 ಸಲಹೆಗಳು
ಸ್ಮಾರಕ ನಿರ್ಮಾಣ ವಿಷಯದಲ್ಲಿ ಬೇಸತ್ತ ಕಾರಣ ಭಾರತಿ ವಿಷ್ಣುವರ್ಧನ್ ಇಂದು ಅಭಿಮಾನ್ ಸ್ಟುಡಿಯೋಗೆ ಆಗಮಿಸಿಲ್ಲ. ಬದಲಾಗಿ ತಮ್ಮ ನಿವಾಸದಲ್ಲಿಯೇ ಪೂಜೆ ನೆರವೇರಿಸಿದ್ದಾರೆ.
ಡಾ.ವಿಷ್ಣುವರ್ಧನ್ ಇಹಲೋಕ ತ್ಯಜಿಸಿ ಎಂಟು ವರ್ಷಗಳು ಉರುಳಿದರೂ, ಇಂದಿಗೂ ಸ್ಮಾರಕ ನಿರ್ಮಾಣಕ್ಕೆ ಚಾಲನೆ ದೊರೆತಿಲ್ಲ. ಆದಷ್ಟು ಬೇಗ 'ಸಿರಿವಂತ'ನ ಸ್ಮಾರಕ ನಿರ್ಮಾಣ ಆದರೆ 'ಸಿಂಹಾದ್ರಿಯ ಸಿಂಹ'ನ ಕುಟುಂಬಕ್ಕೂ, ಅಭಿಮಾನಿಗಳಿಗೂ ಸಮಾಧಾನಕರವೇ.!