Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ವಿಷ್ಣುವರ್ಧನ್ ರವರ 201ನೇ ಸಿನಿಮಾ 'ನಾಗರಹಾವು'!
'ಸಾಹಸಸಿಂಹ' ಡಾ.ವಿಷ್ಣುವರ್ಧನ್ ಅಭಿಮಾನಿಗಳಿಗೆ ಇದೋ ಇಲ್ಲಿದೆ ಸಿಹಿ ಸುದ್ದಿ. ಅಭಿಮಾನಿಗಳ ನೆಚ್ಚಿನ 'ಹೃದಯವಂತ' ಮತ್ತೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.!
ಹಾಗಂದ ಮಾತ್ರಕ್ಕೆ ಈ ಹಿಂದೆ ವಿಷ್ಣುವರ್ಧನ್ ಅಭಿನಯಿಸಿದ ಚಿತ್ರ ರೀ ರಿಲೀಸ್ ಆಗುತ್ತಿಲ್ಲ. ಬದಲಾಗಿ ಹೊಸ ಸಿನಿಮಾದಲ್ಲಿ ನಿಮ್ಮೆಲ್ಲರ ಪ್ರೀತಿಯ 'ಯಜಮಾನ' ಮಿಂಚಲಿದ್ದಾರೆ.!
ನಿಮಗೆ ಅಚ್ಚರಿ ಆದ್ರೂ, ಇದೇ ಸತ್ಯ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತು ದೂದ್ ಪೇಡ ದಿಗಂತ್ ಅಭಿನಯದ ಕೋಡಿ ರಾಮಕೃಷ್ಣ ನಿರ್ದೇಶನದ ಹೊಸ ಚಿತ್ರದ ಶೀರ್ಷಿಕೆ 'ನಾಗರಹಾವು' ಎಂದು ಫಿಕ್ಸ್ ಆಗಿದೆ ಅಂತ ನಾವೇ ನಿಮಗೆ ಹೇಳಿದ್ವಿ. [ಸಾಹಸ ಸಿಂಹನಿಗೆ ನಮಿಸಿದ ಕನ್ನಡದ ತಾರೆಗಳು]
ಇದೀಗ ಅದೇ 'ನಾಗರಹಾವು' ಚಿತ್ರತಂಡದಿಂದ ಹೊರ ಬಿದ್ದಿರುವ ಸುದ್ದಿ ಪ್ರಕಾರ, ಡಾ.ವಿಷ್ಣುವರ್ಧನ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅದು ಹೇಗೆ ಸಾಧ್ಯ ಅಂದ್ರೆ, ಈ ಚಿತ್ರದಲ್ಲಿ ಡಾ.ವಿಷ್ಣುವರ್ಧನ್ ಪಾತ್ರವನ್ನು ವಿಶೇಷವಾಗಿ, ವಿಶಿಷ್ಟವಾಗಿ ಬಳಸಿಕೊಳ್ಳಲಾಗುತ್ತಿದೆ. ನವೀನ ತಂತ್ರಜ್ಞಾನದ ಮುಖಾಂತರ ಡಾ.ವಿಷ್ಣುವರ್ಧನ್ 'ನಾಗರಹಾವು' ಮೂಲಕ ಬೆಳ್ಳಿತೆರೆ ಮೇಲೆ ಬರಲಿದ್ದಾರೆ. [ಕೊನೆಗೂ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿವಾದಕ್ಕೆ ತೆರೆ]
ಹಾಗ್ನೋಡಿದರೆ, ದಶಕಗಳ ಹಿಂದೆ ತೆರೆಕಂಡ 'ನಾಗರಹಾವು' ಚಿತ್ರದಿಂದಲೇ ವಿಷ್ಣುವರ್ಧನ್ 'ಆಂಗ್ರಿ ಯಂಗ್ ಮ್ಯಾನ್' ಆಗಿ ಖ್ಯಾತಿಯ ಉತ್ತುಂಗಕ್ಕೆ ಏರಿದ್ದು. ಇದೀಗ 'ಸಾಹಸಸಿಂಹ' ಡಾ.ವಿಷ್ಣುವರ್ಧನ್ ಇಹಲೋಕ ತ್ಯಜಿಸಿದ 6 ವರ್ಷಗಳ ನಂತರ ಮತ್ತೊಂದು 'ನಾಗರಹಾವು' ಚಿತ್ರದ ಮೂಲಕ ನಿಮ್ಮ ಮುಂದೆ ಬರ್ತಿದ್ದಾರೆ. ವಿಷ್ಣುದಾದಾ ಅಭಿಮಾನಿಗಳಿಗೆ ಇದಕ್ಕಿಂತ ಗುಡ್ ನ್ಯೂಸ್ ಬೇಕಾ.?