Don't Miss!
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಕೇಸ್: ಪ್ರಶಾಂತ್ ಸಂಬರ್ಗಿ ಆರೋಪಗಳಿಗೆ ಅನುಶ್ರೀ ಕೊಟ್ಟ ಉತ್ತರ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿಶೋರ್ ಶೆಟ್ಟಿ ನಿರೂಪಕಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿತ್ತು. ಮಂಗಳೂರು ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಕಿಶೋರ್ ಹೇಳಿಕೆ ನೀಡಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿತ್ತು.
Recommended Video
ಇದರ ಬೆನ್ನಲ್ಲೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ನಿರೂಪಕಿ ಅನುಶ್ರೀ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಕಳೆದ ಎರಡು ದಿನದ ಬೆಳವಣಿಗೆ ಹಾಗೂ ಸಂಬರ್ಗಿ ಆರೋಪಗಳ ಕುರಿತು ನಿರೂಪಕಿ ಅನುಶ್ರೀ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಡ್ರಗ್ಸ್ ಕೇಸ್ ನಲ್ಲಿ ಅನುಶ್ರೀ ನಿರಾಳ: ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ
ಮುಂಬೈನಿಂದ ಬೆಂಗಳೂರಿಗೆ ವಾಪಸ್ ನಿರೂಪಕಿ ಅನುಶ್ರೀ ''ನಾನು ಡ್ರಗ್ಸ್ ತೆಗೆದುಕೊಂಡಿದ್ದೇನೆ ಅಥವಾ ಮಾರಾಟ ಮಾಡಿದ್ದೇನೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ನನ್ನನ್ನು ಕಳೆದ ಸಲ ಪೊಲೀಸರು ವಿಚಾರಣೆ ಕರೆದಿರಲಿಲ್ಲ. ಕಾನೂನಿನ ಅಡಿಯಲ್ಲಿ ನಾನು ಏನೆಲ್ಲಾ ಹೇಳಬೇಕಿತ್ತು ಎಲ್ಲವೂ ಹೇಳಿದ್ದೇನೆ. ಅವರು ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದ್ದೇನೆ. ಆವತ್ತು ಕೊಟ್ಟಿದ್ದೆ, ಈಗಲೂ ಕೊಟ್ಟಿದ್ದೀನಿ'' ಎಂದರು.
ಇನ್ನು ಅನುಶ್ರೀ ಅವರಿಗೆ ಮಾಜಿ ಮುಖ್ಯಮಂತ್ರಿಯೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಅವರಿಂದಲೇ ಅನುಶ್ರೀ ಸೇಫ್ ಆಗ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ನಟಿ, ''ನನ್ನ ಹಿಂದೆ ಯಾರೂ ಇಲ್ಲ, ನಾನು ಒಬ್ಬಳೆ. ಅವರು ಹೇಳುತ್ತಿರುವುದು ಯಾರೆಂದು ಅವರೇ ಹೇಳಬೇಕಿದೆ'' ಎಂದು ತಿರುಗೇಟು ಕೊಟ್ಟರು.
ಇನ್ನು ಆಸ್ತಿ ಹೇಗೆ ಬಂತು ಎಂದು ವಿಚಾರದ ಬಗ್ಗೆ ಮಾತನಾಡಿದ ಅನುಶ್ರೀ, ''ಬೆಂಗಳೂರಿನಲ್ಲಿ ನಾನಿರುವುದು ಬಾಡಿಗೆ ಮನೆಯಲ್ಲಿ, ಮಂಗಳೂರಿನಲ್ಲಿ ಕಟ್ಟಿರುವ ಮನೆ ಮೇಲೆ ಲೋನ್ ಇದೆ. ಬೇಕಿದ್ರೆ ಪರೀಕ್ಷೆ ಮಾಡಿಕೊಳ್ಳಿ'' ಎಂದರು.
ಪ್ರಶಾಂತ್ ಸಂಬರ್ಗಿ ಬಗ್ಗೆ ನಟಿ ರಾಗಿಣಿ ದ್ವಿವೇದಿ ಹೇಳಿದ್ದು ಹೀಗೆ
''ನಾನು ಡ್ರಗ್ಸ್ ಸೇವಿಸಿಲ್ಲ, ಡ್ರಗ್ಸ್ ಮಾರಾಟವೂ ಮಾಡಿಲ್ಲ. ಪೊಲೀಸರ ತನಿಖೆಗೆ ನಾನು ಸಹಕರಿಸಿದ್ದೇನೆ. ಈ ವಿಚಾರಗಳು ವರದಿಯಾಗುವುದಕ್ಕೂ ಮುಂಚೆಯೇ ನಾನು ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದೆ. ಈಗ ಬಂದಿದ್ದೇನೆ. ನಾನೆಲ್ಲೂ ಓಡಿ ಹೋಗಿಲ್ಲ, ತಪ್ಪಿಸಿಕೊಂಡು ಹೋಗಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಅನುಶ್ರೀ ಕುರಿತಾಗಿ ಸ್ಪಷ್ಟನೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ''ಆರೋಪಿಗಳಿಗೆ ಚಾರ್ಜ್ಶೀಟ್ ಬಗೆಗೆ ಇರುವ ಆರೋಪಗಳನ್ನು ತಮ್ಮ ವಕೀಲರ ಮೂಲಕ ಕೋರ್ಟ್ನಲ್ಲಿ ಹೇಳಿಕೊಳ್ಳಬಹುದು, ಇದರ ಹೊರತು ಆರೋಪಿ ಮಾಡಿರುವ ಆರೋಪದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜಾರ್ಜ್ ಶೀಟ್ ನಲ್ಲಿ ಅನುಶ್ರೀ ಆರೋಪಿ ಎಂದು ಉಲ್ಲೇಖ ಆಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ. ಕಿಶೋರ್ ಅಮನ್ ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಏಕೆಂದರೆ ಪೊಲೀಸರು ಆ ಪ್ರಕರಣದ ತನಿಖೆ ಮುಗಿಸಿದ್ದಾರೆ, ಮರು ತನಿಖೆ ಮಾಡುವ ಅಗತ್ಯವಿಲ್ಲ'' ಎಂದಿದ್ದಾರೆ.