Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಚಾರಣೆಗೆ ಕರೆದಿದ್ದಾರೆ ಅಷ್ಟೇ, ನಾನು ಅಪರಾಧಿಯಲ್ಲ': ಅನುಶ್ರೀ ಮಾಧ್ಯಮ ಪ್ರಕಟಣೆ
ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಟಿ, ನಿರೂಪಕಿ ಅನುಶ್ರೀ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಹಿನ್ನೆಲೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಲ್ಲಿ ಪೊಲೀಸ್ ವಿಚಾರಣೆ ಎದುರಿಸಬೇಕಾಗಿದೆ.
Recommended Video
ಈ ವಿಚಾರ ತಿಳಿಯುತ್ತಿದ್ದಂತೆ ಅನುಶ್ರೀ ಹೆಸರು ಮಾಧ್ಯಮಗಳಲ್ಲಿ ಚರ್ಚೆಯಾಗಲು ಶುರುವಾಗಿದೆ. ಗುರುವಾರ ಸಂಜೆಯವರೆಗೂ ನನಗೆ ನೋಟಿಸ್ ಬಂದಿಲ್ಲ ಎಂದೇ ಹೇಳುತ್ತಿದ್ದ ಅನುಶ್ರೀ, ನಂತರ ನೋಟಿಸ್ ತಲುಪಿರುವುದನ್ನು ಬಹಿರಂಗಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ 'ವಿಚಾರಣೆಗೆ ಕರೆದಿದ್ದಾರೆ ಅಷ್ಟೇ, ನಾನು ಅಪರಾಧಿಯಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.
ನೊಟೀಸ್ ಬಂದಿಲ್ಲ, ಕಿಶೋರ್ ಶೆಟ್ಟಿ ಹಳೆ ಪರಿಚಯ: ಅನುಶ್ರೀ
''ವಿಚಾರಣೆಗೆ ಕರೆದ ಕೂಡಲೇ ನಾನೇನು ಅಪರಾಧಿಯಲ್ಲ, ಇದರಲ್ಲಿ ನನ್ನ ಪಾತ್ರವೇನು ಇಲ್ಲ. ನನಗೆ ತಿಳಿದಿರುವ ಮಾಹಿತಿ ನೀಡಿ ಪೊಲೀಸರಿಗೆ ಸಂಪೂರ್ಣವಾಗಿ ಸಹರಕರಿಸುತ್ತೇನೆ'' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
''ನೋಟಿಸ್ ಬಂದಿರುವುದು ನಿಜ, ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗುತ್ತೇನೆ. ಅಷ್ಟು ಮಾತ್ರಕ್ಕೆ ನನ್ನ ಅಪರಾಧಿ ಎಂದು ಬಿಂಬಿಸುವುದು ಸೂಕ್ತವಲ್ಲ, ನನ್ನ ಕುಟುಂಬಕ್ಕೂ ಇದು ತೀವ್ರ ನೋವು ತಂದಿದೆ'' ಎಂದು ವಿನಂತಿಸಿದ್ದಾರೆ.
''ಪೊಲೀಸರ ವಿಚಾರಣೆ ಎದುರಿಸಿದ ನಂತರ ಸತ್ಯಾಸತ್ಯತೆಗಳ ಬಗ್ಗೆ ನನಗೂ ಮಾಹಿತಿ ಸಿಗಲಿದೆ. ಆ ಬಳಿಕ ನಾನೇ ಆ ಬಗ್ಗೆ ಸ್ಪಷ್ಟನೆ ನೀಡುತ್ತೇನೆ'' ಎಂದು ನಿರೂಪಕಿ ಅನುಶ್ರೀ ಹೇಳಿದ್ದಾರೆ.