Don't Miss!
- News ಆಜಾನ್ ಕೂಗುತ್ತಿದ್ದಾಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ: ವಿಡಿಯೋ ಹಂಚಿಕೊಂಡು ವಿಜಯೇಂದ್ರ ಕಿಡಿ
- Automobiles BAJAJ CNG ಬೈಕ್ ಚಿತ್ರಗಳು ಸೋರಿಕೆ: ಬೆಲೆ ಕೇಳಿದರೆ ಶಾಕ್ ಆಗುವುದಂತೂ ಪಕ್ಕಾ!
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಕೇಸ್ ನಲ್ಲಿ ಅನುಶ್ರೀ ನಿರಾಳ: ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ
ನಿರೂಪಕಿ ಅನುಶ್ರೀ ಡ್ರಗ್ ಕೇಸ್ ಪ್ರಕರಣ ಸಂಬಂಧ ಮಂಗಳೂರು ಸಿ.ಸಿ.ಬಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳ ಪಟ್ಟಿಯಿಂದ ಅನುಶ್ರೀ ಹೆಸರನ್ನು ಕೈಬಿಟ್ಟಿರುವ ಪೊಲೀಸರು ಆರು ಮಂದಿ ಆರೋಪಿಗಳ ವಿರುದ್ದ ಅಂತಿಮ ವರದಿ ಸಲ್ಲಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಅನುಶ್ರೀಗೆ ಪೊಲೀಸರು ಕ್ಲೀನ್ಚಿಟ್ ನೀಡಿದ್ದಾರೆ. ಆದರೆ ಈ ನಡುವೆ ಚಾರ್ಜ್ಶೀಟ್ನಲ್ಲಿ ಆರೋಪಿ ಕಿಶೋರ್ ಅನುಶ್ರೀ ಡ್ರಗ್ಸ್ ತೆಗೆದುಕೊಳ್ತಿದ್ರು ಅಂತಾ ಹೇಳಿಕೆ ನೀಡಿದ್ದು ಇದೀಗ ಸಂಚಲನ ಸೃಷ್ಟಿಸಿದೆ.
ಡ್ರಗ್ ಕೇಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಕೊಂಚ ರಿಲೀಫ್ ಸಿಕ್ಕದಂತಾಗಿದೆ. ಪ್ರಕರಣ ಸಂಬಂಧ ಮಂಗಳೂರು ಸಿ.ಸಿ.ಬಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದು, ಆ ಅಂತಿಮ ವರದಿಯಲ್ಲಿ ಆರೋಪಿಗಳ ಪಟ್ಟಿಯಲ್ಲಿ ಅನುಶ್ರೀ ಹೆಸರು ಕೈಬಿಡಲಾಗಿದೆ. ಆದ್ರೆ ಪ್ರಕರಣದ ಎ2 ಆರೋಪಿ ಕೊರಿಯೊಗ್ರಾಫರ್ ಕಿಶೋರ್ ಅಮನ್ ಶೆಟ್ಟಿ ತನ್ನ ಹೇಳಿಕೆಯಲ್ಲಿ ಅನುಶ್ರೀ, ತರುಣ್ ಹಾಗೂ ತಾನು ಜೊತೆಯಾಗಿ ಸೇರಿ ಡ್ರಗ್ ಪಾರ್ಟಿ ಮಾಡ್ತಿದ್ವಿ ಎಂದು ಹೇಳಿದ್ದಾನೆ. ಇದರ ಜೊತೆ ಪಾರ್ಟಿಗೆ ಅನುಶ್ರೀ ಡ್ರಗ್ ತಗೊಂಡು ಬರ್ತಿದ್ರು ಅಂತಾ ಚಾರ್ಚ್ಶೀಟ್ನಲ್ಲಿ ಹೇಳಿಕೆ ನೀಡಿದ್ದಾನೆ. ಆದ್ರೆ ಕಿಶೋರ್ ಅವನ್ ಅವನದ್ದೇ ಎನ್ನಲಾದ ಸಹಿ ಇರುವ ಈ ಚಾರ್ಜ್ಶೀಟ್ನಲ್ಲಿರುವ ಹೇಳಿಕೆ ಇದು ಯಾವುದು ನನ್ನದಲ್ಲ, ಇದರ ಬಗ್ಗೆ ನನಗೇನು ಗೊತ್ತಿಲ್ಲ, ನಮ್ಮ ಡ್ರಗ್ ಕೇಸ್ಗು ಅನುಶ್ರಿಗು ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾನೆ. ಅನುಶ್ರೀಯವರಿಗೆ ಡ್ಯಾನ್ಸ್ ಶೋ ಗೋ ಕೊರಿಯೋಗ್ರಾಫ್ ಮಾಡಿದ್ದೇನೆ. ಆಮೇಲೆ ನನಗೂ ಅವರಿಗೂ ಯಾವುದೇ ಸಂಬಂಧ ಇಲ್ಲ..ಡ್ಯಾನ್ಸ್ ಶೋ ವಿನ್ ಆದ ಸಂಧರ್ಭದಲ್ಲಿ ಅನುಶ್ರೀ ನಮಗೆಲ್ಲಾ ಒಂದು ರೆಸ್ಟೋರೆಂಟ್ ನಲ್ಲಿ ಪಾರ್ಟಿ ನೀಡಿದ್ದರು..ಆ ಬಳಿಕ ನಾನು ಅನುಶ್ರೀಯವರನ್ನು ಭೇಟಿಯಾಗಿಲ್ಲ. ಚಾರ್ಚ್ ಶೀಟ್ ನಲ್ಲಿ ಇರೋದು ನನ್ನ ಹೇಳಿಕೆಯಲ್ಲ, ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ .ಅನುಶ್ರೀ ಗೂ ಡ್ರಗ್ಸ್ ಕೇಸ್ ಗೂ ಯಾವುದೇ ಸಂಬಂಧ ಇಲ್ಲ..ನಾನು ಅನುಶ್ರೀ ವಿರುದ್ಧ ಆ ತರ ಯಾವುದೇ ಹೇಳಿಕೆ ನೀಡಿಲ್ಲ. ಚಾರ್ಜ್ ಶೀಟ್ ನಲ್ಲಿ ಬಂದಿರುದೆಲ್ಲವೂ ಸಂಪೂರ್ಣ ಸುಳ್ಳು..ನಾವು ಯಾವುದೇ ಡ್ರಗ್ಸ್ ಪಾರ್ಟಿ ಮಾಡಿಲ್ಲ. ಅನುಶ್ರೀ ಅಂತಹ ಹುಡುಗಿಯೂ ಅಲ್ಲ. ಅನುಶ್ರೀ ಜೊತೆ ಡ್ರಿಂಕ್ಸ್, ಡ್ರಗ್ಸ್ ಪಾರ್ಟಿ ಮಾಡಿಲ್ಲ. ನಾನು ಅನುಶ್ರೀಗೆ ಕೇವಲ ಕೊರಿಯೋಗ್ರಾಫ್ ಮಾಡುತ್ತಿದ್ದೆ. ಆಮೇಲೆ ಅನುಶ್ರೀಯವರ ಜೊತೆ ಸಂಬಂಧ ಇಲ್ಲ. ಈಗ ಹಬ್ಬಿರುವ ಸುಳ್ಳು ವಿಚಾರದ ಹಿಂದೆ ಬೇರೆ ಯಾರೋ ಇರಬಹುದು. ನಾನು ಎರಡು ಬಾರಿ ಡ್ರಗ್ಸ್ ತೆಗೆದುಕೊಂಡಿದ್ದೇನೆ. ಈಗ ಪ್ರತಿ ತಿಂಗಳು ಕೋರ್ಟ್ಗೆ ಹಾಜರಾಗುತ್ತಿದ್ದೇನೆ ಅಂತಾ ಕಿಶೋರ್ ಅಮನ್ ಹೇಳಿದ್ದಾನೆ.
ಕಿಶೋರ್ ಅಮನ್ ಹೇಳಿಕೆಯಲ್ಲಿ ಅನುಶ್ರೀ ವಿರುದ್ದ ಡ್ರಗ್ ಸೇವನೆ, ಮಾರಾಟ ಆರೋಪಿ ಕೇಳಿ ಬಂದಿದ್ದರು ಸಹ ವಿಚಾರಣೆ ನಡೆಸಿದ ಪೊಲೀಸರಿಗೆ ಇದಕ್ಕೆ ಪೂರಕವಾಗಿ ಯಾವುದೇ ಸಾಕ್ಷಿ, ಪುರಾವೆಗಳು ಸಿಕ್ಕಿರಲಿಲ್ಲ. ಹೀಗಾಗಿ ಸಂಪೂರ್ಣ ವಿಚಾರಣೆ ನಡೆಸಿಯೇ ಈ ಅಂತಿಮ ವರದಿಯನ್ನು ಒಂಬತ್ತು ತಿಂಗಳ ಹಿಂದೆಯೇ ಸಲ್ಲಿಕೆ ಮಾಡಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.
ಆರೋಪಿಗಳಿಗೆ ಚಾರ್ಜ್ಶೀಟ್ ಬಗೆಗೆ ಇರುವ ಆರೋಪಗಳನ್ನು ತಮ್ಮ ವಕೀಲರ ಮೂಲಕ ಕೋರ್ಟ್ನಲ್ಲಿ ಹೇಳಿಕೊಳ್ಳಬಹುದು, ಇದರ ಹೊರತು ಆರೋಪಿ ಮಾಡಿರುವ ಆರೋಪದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜಾರ್ಜ್ ಶೀಟ್ ನಲ್ಲಿ ಅನುಶ್ರೀ ಆರೋಪಿ ಎಂದು ಉಲ್ಲೇಖ ಆಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ. ಕಿಶೋರ್ ಅಮನ್ ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಏಕೆಂದರೆ ಪೊಲೀಸರು ಆ ಪ್ರಕರಣದ ತನಿಖೆ ಮುಗಿಸಿದ್ದಾರೆ, ಮರು ತನಿಖೆ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ ಆಯುಕ್ತ ಶಶಿಕುಮಾರ್.
ಪ್ರಕರಣದ ಸಂಪೂರ್ಣ ತನಿಖೆ ಪೂರ್ತಿ ಮಾಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದೇವೆ. ಇಂದ್ರಜಿತ್ ಆರೋಪದ ಬಗ್ಗೆ ನಾನೇನು ಹೇಳಲ್ಲ. ನಾನು ಮಂಗಳೂರು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿ ಎಂಟು ತಿಂಗಳಾಗಿದೆ ಅಷ್ಟೇ. ಒಂಬತ್ತು ತಿಂಗಳ ಹಿಂದೆಯೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈಗ ಯಾಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ. ಆರು ಜನ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಐದು ಜನ ಆರೋಪಿಗಳಿಗೆ ಜಾಮೀನು ಆಗಿದೆ. ಒಬ್ಬ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಸೆ.19 2020 ಡ್ರಗ್ಸ್ ಪ್ರಕರಣ ದಾಖಲು ಆಗಿತ್ತು. ಡಿ.11.2020 ಅಂತಿಮ ವರದಿ ಸಲ್ಲಿಸಿದ್ದೇವೆ ಅಂತಾ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಆರು ಜನರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದರಲ್ಲಿ ಐದು ಮಂದಿ ಜಾಮೀನಿನ ಮೇಲೆ ಹೊರ ಬಂದಿದ್ದು, ಓರ್ವ ನ್ಯಾಯಾಂಗ ಬಂಧನದಲ್ಲಿದ್ದಾನೆ. ಒಟ್ಟಿನಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದಲ್ಲಿ ಇದೀಗ ಅನುಶ್ರೀಗೆ ಕೊಂಚ ರಿಲೀಫ್ ಸಿಕ್ಕಿದ್ದು ಮುಂದೆನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.