Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ವಿವಾದದಲ್ಲಿ ಚಿರು ಸರ್ಜಾ ಹೆಸರು ತಂದಿದ್ದಕ್ಕೆ ಚೇತನ್ ಖಂಡನೆ
ಕಳೆದ ಒಂದು ವಾರದಿಂದ ಸ್ಯಾಂಡಲ್ವುಡ್ ಇಂಡಸ್ಟ್ರಿಯಲ್ಲಿ ಡ್ರಗ್ಸ್ ಮಾಫಿಯಾ ಭಾರಿ ಚರ್ಚೆಗೆ ಕಾರಣವಾಗುತ್ತಿದೆ. ಎನ್ಸಿಬಿ ಬಲೆಗೆ ಬಿದ್ದ ಡ್ರಗ್ಸ್ ಡೀಲರ್ ಬಹಿರಂಗಪಡಿಸಿರುವ ಹೇಳಿಕೆಯಿಂದ ಸಿನಿಮಾರಂಗ ಕೆಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವುದು ತಿಳಿದು ಬಂದಿದೆ.
Recommended Video
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ವುಡ್ ಡ್ರಗ್ಸ್ ವಾಸನೆ ಇದೆ, ಹಲವರು ಡ್ರಗ್ಸ್ ಸೇವಿಸುತ್ತಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ನಟ ಚಿರಂಜೀವಿ ಸರ್ಜಾ ಅವರ ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.
ಡ್ರಗ್ಸ್ ಎಫೆಕ್ಟ್: ಮೂರು ಘಟನೆಗಳಿಗೆ ಸ್ಪಷ್ಟನೆ ಕೇಳಿದ ಇಂದ್ರಜಿತ್ ಲಂಕೇಶ್
ಡ್ರಗ್ಸ್ ವಿವಾದಲ್ಲಿ ಚಿರು ಸರ್ಜಾರ ಹೆಸರು ತಂದಿದ್ದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಆ ದಿನಗಳು ಖ್ಯಾತಿಯ ಚೇತನ್ ಸಹ ಈ ಇದಕ್ಕೆ ವಿರೋಧ ತೋರಿದ್ದಾರೆ. ಅಷ್ಟಕ್ಕೂ, ಚೇತನ್ ಏನಂದ್ರು?
ಡ್ರಗ್ಸ್ ಕುರಿತು ಚೇತನ್ ಹೇಳಿದ್ದೇನು?
ಸಿನಿಮಾ ಇಂಡಸ್ಟ್ರಿಯಲ್ಲಿ ಡ್ರಗ್ಸ್ ಸೇವನೆ ಹಾಗೂ ಬಳಕೆ ಇದೆಯಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆ ನೇರವಾಗಿ ಮಾತನಾಡದ ಚೇತನ್, ನನಗೆ ಡ್ರಗ್ಸ್, ಪಾರ್ಟಿ ಅಭ್ಯಾಸ ಇಲ್ಲ ಎಂದಿದ್ದಾರೆ. ''ಕನ್ನಡ ಚಿತ್ರರಂಗದ ಯಾವುದೇ ಸಾಮಾಜಿಕ ಅಭ್ಯಾಸಗಳ ಬಗ್ಗೆ ಗೊತ್ತಿಲ್ಲದ ನನಗೆ, ಸಿಗರೇಟು/ಮದ್ಯ/ಮಾದಕ ಮತ್ತು ಪಾರ್ಟಿಗೆ ಹೋಗುವ ಅಭ್ಯಾಸಗಳು ಇಲ್ಲ'' ಎಂದು ಹೇಳಿದ್ದಾರೆ.
ಡ್ರಗ್ಸ್ ಬಗ್ಗೆ ಮಾಡಬೇಕಿರುವುದೇನು?
ಬೇಕಾಗಿರುವುದು: ಮಾದಕ ವಸ್ತುವಿನ ಜಾಗೃತಿ ಅಭಿಯಾನ., ಪುನರ್ವಸತಿ ಕಾರ್ಯಕ್ರಮಗಳು, ಸರ್ಕಾರದ ಉತ್ತಮ ನೀತಿಗಳು, ಮತ್ತು ಸರಿಯಾದ ತನಿಖೆಗಳು.
ಬೇಡವಾದದ್ದು: ಮಸಿ ಬಳಿಯುವುದು/ಉದ್ರೇಕಕಾರಿ ಹೇಳಿಕೆಗಳು ಎಂದು ಟ್ವಿಟ್ಟರ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಭಾವನೆಗೆ ಭಿಕ್ಷುಕರಂತೆ ಕಾದು, ಸೀಮೆಎಣ್ಣೆ-ಅಕ್ಕಿಗೆ ಕ್ಯೂ ನಿಂತವರು ನಾವು, ಇಂದು 2 ಸಿನಿಮಾಗೆ ಕುಬೇರರು: ಜಗ್ಗೇಶ್
ನಮ್ಮ ನಡುವೆ ಇಲ್ಲದ ವ್ಯಕ್ತಿ ಬಗ್ಗೆ ಮಾತನಾಡಬಾರದು
ಇಂದ್ರಜಿತ್ ಲಂಕೇಶ್ ಅವರು ಚಿರಂಜೀವಿ ಸರ್ಜಾರ ಅವರ ಸಾವಿನ ಬಗ್ಗೆ ಚರ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೇತನ್, ''ನಮ್ಮ ನಡುವೆ ಇಲ್ಲದ ವ್ಯಕ್ತಿಯ ಮೇಲೆ ಕೆಸರೆರಾಚಾಟ ಮಾಡುತ್ತಿರುವುದರ ಬಗ್ಗೆ ದುಃಖವಿದೆ. ನಾವು ಯಾವುದೇ ಆರೋಪಗಳನ್ನು ಹೊರಿಸಿದರೂ ಅದನ್ನು ಸಮರ್ಥಿಸಲು ಅಥವಾ ಉತ್ತರಿಸಲು ಆ ಧ್ವನಿಯೇ ಇಲ್ಲದಿರುವ ಸಮಯದಲ್ಲಿ ಅವರ ಮೇಲೆ ಕೆಸರು ಎರಚುವುದನ್ನು ನಾನು ಖಂಡಿಸುತ್ತೇನೆ'' ಎಂದಿದ್ದಾರೆ.
ಇಂದ್ರಜಿತ್ ಚಿರು ಸಾವಿನ ಬಗ್ಗೆ ಏನು ಹೇಳಿದ್ದರು
ಕನ್ನಡ ಚಿತ್ರರಂಗದ ಕೆಲವು ತಾರೆಯರು ಡ್ರಗ್ಸ್ ಚಟಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಿರುವ ಇಂದ್ರಜಿತ್ ಲಂಕೇಶ್ ''ಇತ್ತೀಚಿಗಷ್ಟೆ ಯುವ ನಟನ ಸಾವು ಸಂಭವಿಸಿತ್ತು. ಆದರೆ, ಆ ನಟ ಪೋಸ್ಟ್ ಮಾರ್ಟಮ್ ಏಕೆ ಮಾಡಿಲ್ಲ? ರಾಜಕೀಯ ಒತ್ತಡವಾ ಅಥವಾ ಕುಟುಂಬದ ಒತ್ತಡವಾ'' ಎಂದು ಪ್ರಶ್ನಿಸಿದ್ದರು.