Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿಯರ ನ್ಯಾಯಾಂಗ ಬಂಧನ ವಿಸ್ತರಣೆ: ಹೈ ಕೋರ್ಟ್ ಮೊರೆ ಹೋದ ಸಂಜನಾ
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿ. ನಟಿಯರ ಜಾಮೀನು ಅರ್ಜಿ ನಿರಾಕರಣೆ ಮಾಡಿರುವ ಎನ್ಡಿಪಿಎಸ್ ನ್ಯಾಯಾಲಯ ಇಬ್ಬರಿಗೂ ಅಕ್ಟೋಬರ್ 23ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಮತ್ತೊಂದೆಡೆ ನಟಿ ಸಂಜನಾ ಗಲ್ರಾನಿ ಜಾಮೀನಿಗಾಗಿ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದ್ದು, ಈ ಬಾರಿ ಕರ್ನಾಟಕ ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಶುಕ್ರವಾರ ನಟಿ ಸಂಜನಾ ಗಲ್ರಾನಿ ಪರ ವಕೀಲರು ಕರ್ನಾಟಕ ಹೈಕೋರ್ಟ್ಗೆ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದೆ ಓದಿ....
ಡ್ರಗ್ಸ್ ಪ್ರಕರಣ: ನಟಿ ಸಂಜನಾ-ರಾಗಿಣಿ ಜಾಮೀನು ಅರ್ಜಿ ವಜಾ
ಹೈ ಕೋರ್ಟ್ಗೆ ಅರ್ಜಿ ಸಲ್ಲಿಕೆ
ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಹೈ ಕೋರ್ಟ್ಗೆ ಮನವಿ ಮಾಡಿದ್ದಾರೆ. ಸಂಜನಾ ಪರ ವಕೀಲರಿಂದ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಸೆಪ್ಟೆಂಬರ್ 8ರಂದು ಬಂಧನ
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ನಟಿ ಸಂಜನಾ ಮನೆ ಮೇಲೆ ಸೆಪ್ಟೆಂಬರ್ 8ರಂದು ದಾಳಿ ಮಾಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದು 8 ದಿನಗಳ ಕಾಲ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಸೆಪ್ಟೆಂಬರ್ 16ರಂದು ಎನ್ಡಿಪಿಎಸ್ ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅಂದಿನಿಂದ ಸಂಜನಾ ಜೈಲಿನಲ್ಲಿಯೇ ಇದ್ದಾರೆ.
Recommended Video
ಇಡಿ ಅಧಿಕಾರಿಗಳಿಂದಲೂ ವಿಚಾರಣೆ
ಡ್ರಗ್ಸ್ ಪ್ರಕರಣದ ತನಿಖೆ ವೇಳೆ ನಟಿಯರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿತ್ತು. ಅಕ್ರಮ ಹಣ ವರ್ಗಾವಣೆ, ಹೂಡಿಕೆ ಮತ್ತು ಆಸ್ತಿಗಳ ಖರೀದಿ ಕುರಿತು ಇಡಿ ತನಿಖೆ ಕೈಗೊಂಡಿದೆ. ಜಾರಿ ನಿರ್ದೇಶನಾಲಯ ಐದು ದಿನಗಳ ಕಾಲ ನಟಿಯರನ್ನು ವಶಕ್ಕೆ ಪಡೆದು ಜೈಲಿನಲ್ಲಿಯೇ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.