Don't Miss!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ಗೆ 'ಕನ್ನಡ ಕಲಾತಿಲಕ' ಬಿರುದು ನೀಡಿ ಗೌರವಿಸಿದ ದುಬೈ ಕನ್ನಡಿಗರು
ಭಾರತೀಯ ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಅನಿವಾಸಿ ಕನ್ನಡಿಗರು ಸುದೀಪ್ ಅವರನ್ನು ಗೌರವಿಸಿದ್ದಾರೆ. ದುಬೈನಲ್ಲಿ ಅಭಿನಯ ಚಕ್ರವರ್ತಿಯನ್ನು ಭೇಟಿ ಮಾಡಿ ಅಭಿನಂದಿಸಿದ ಕನ್ನಡಿಗರು 'ಕನ್ನಡದ ಕಲಾತಿಲಕ' ಎಂದು ಬಿರುದು ನೀಡಿದ್ದಾರೆ.
ಜನವರಿ 31 ರಂದು ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಸುದೀಪ್ ನಟನೆಯ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದಲ್ಲದೇ, 25 ವರ್ಷದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
'ವಿಕ್ರಾಂತ್ ರೋಣ' ಬಳಿಕ ಸುದೀಪ್ ಮುಂದಿನ ಸಿನಿಮಾ ಯಾವುದು? ಯಾವಾಗ ಆರಂಭವಾಗುತ್ತೆ? ಇಲ್ಲಿದೆ ಮಾಹಿತಿ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಹಾಗೂ ಯು.ಎ.ಇ.ಯಲ್ಲಿ ಕಾರ್ಯೋನ್ಮುಖವಾಗಿರುವ ಕರ್ನಾಟಕ ಪರ ಸಂಘಟನೆಗಳು ಒಟ್ಟುಗೂಡಿ ಸುದೀಪ್ ಅವರಿಗೆ 'ಕನ್ನಡ ಕಲಾತಿಲಕ' ಎಂದು ಬಿರುದು ಘೋಷಿಸಿದ್ದಾರೆ.
ದುಬೈನಲ್ಲಿ ಸುದೀಪ್ ಅವರಿಗೆ ಬಿರುದು ಪ್ರದಾನ ಮಾಡಿರುವುದು ಹಾಗೂ ಗೌರವಿಸಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಕಾದಿದೆ ಮತ್ತೊಂದು ಸರ್ಪ್ರೈಸ್: ಏನದು?
Recommended Video
'ವಿಕ್ರಾಂತ್ ರೋಣ' ಸಿನಿಮಾದ ಕಾರ್ಯಕ್ರಮ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಬಂದ ತಕ್ಷಣ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಬಿಗ್ ಬಾಸ್ ಆರಂಭವಾಗುತ್ತೆ ಎಂದು ವಾಹಿನಿಯ ಮುಖ್ಯಸ್ಥರು ಮಾಹಿತಿ ನೀಡಿದ್ದರು. ಆದರೆ, ಸ್ಪಷ್ಟವಾದ ದಿನಾಂಕ ಘೋಷಿಸಿರಲಿಲ್ಲ.