Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದುನಿಯಾ' ರಶ್ಮಿ ಹೊಸ ಸಿನಿಮಾ ಪ್ರಾರಂಭ
'ದುನಿಯಾ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ನಟಿ ರಶ್ಮಿ ಬಳಿಕ ಅನೇಕ ಸಿನಿಮಾ ಮಾಡಿದರು. ಆದರೆ, ಯಾವ ಸಿನಿಮಾವೂ ಹಿಟ್ ಆಗಲಿಲ್ಲ. ಇಂದಿಗೂ ರಶ್ಮಿ ಒಂದೇ ಒಂದು ಗೆಲುವಿಗಾಗಿ ಕಾಯುತ್ತಿದ್ದಾರೆ.
ಈಗ ಬಹಳ ದಿನಗಳ ನಂತರ ರಶ್ಮಿ ಒಂದು ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಈ ಸಿನಿಮಾದ ಟೈಟಲ್ 'ಜಗ್ಗಿ ಜಗನ್ನಾಥ್'. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಓಂ ಸಾಯಿ ಪ್ರಕಾಶ್ ಎಂದ ತಕ್ಷಣ ಸೆಂಟಿಮೆಂಟ್ ಹಾಗೂ ಭಕ್ತಿ ಸಿನಿಮಾಗಳು ನೆನಪಿಗೆ ಬರುತ್ತವೆ. ಆದರೆ, ಇದೊಂದು ಪಕ್ಕಾ ಆಕ್ಷನ್ ಸಿನಿಮಾವಾಗಿದೆ.
ದುನಿಯಾ ರಶ್ಮಿ ಮನೆ ಮೇಲಿಂದ ಬಿದ್ದು ಯುವಕ ಸಾವು
ಕಳೆದ ವರ್ಷ 'ಕಾರ್ನಿ' ಎಂಬ ಸಿನಿಮಾ ಮಾಡಿದ್ದ ರಶ್ಮಿ ಅದರ ನಂತರ ಈ ಸಿನಿಮಾ ಶುರು ಮಾಡಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿ ಹಳ್ಳಿಯ ಒಬ್ಬ ಮುಗ್ದ ಹುಡುಗಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಬಹಳ ಉತ್ಸುಕರಾಗಿದ್ದಾರಂತೆ.
ಪೇಪರ್ ಆಯುವ ಒಬ್ಬ ಹುಡುಗ ಆಘೋರಿಯಾಗುವ ಕಥೆ ಈ ಸಿನಿಮಾದಲ್ಲಿ ಇದೆಯಂತೆ. ಇದರ ಜೊತೆಗೆ ಆಕ್ಷನ್ ಹಾಗೂ ಲವ್ ಸ್ಟೋರಿ ಹೊಂದಿದೆ. ರಶ್ಮಿಗೆ ಜೋಡಿಯಾಗಿ ಲಿಖಿತ್ ರಾಜ್ ಕಾಣಿಸಿಕೊಂಡಿದ್ದಾರೆ.