Don't Miss!
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಯಾರ್ ಜೊತೆಗೂ ಮಾತಾಡುತ್ತಿಲ್ಲ ಯಾಕೆ?
ಸಾಮಾನ್ಯವಾಗಿ ಹುಡುಗಿರು ತುಂಬ ಮಾತಾನಾಡುತ್ತಾರೆ. ಆದರೆ, ನಟಿ ದುನಿಯಾ ರಶ್ಮಿ ಈಗ ಯಾರ್ ಜೊತೆಗೂ ಮಾತನಾಡುತ್ತಿಲ್ಲ. ಹಾಗಂತ ಅದು ರಿಯಲ್ ಲೈಫ್ ನಲ್ಲಿ ಅಲ್ಲ ಸಿನಿಮಾದಲ್ಲಿ ಮಾತ್ರ.
ರಶ್ಮಿ ಈಗ 'ಕಾರ್ನಿ' ಎಂಬ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಲೀಡ್ ರೋಲ್ ನಲ್ಲಿ ಅವರ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ವಿಭಿನ್ನ ಪಾತ್ರವನ್ನು ಅವರು ಪ್ರಯತ್ನ ಮಾಡಿದ್ದಾರೆ. ಯಾಕೆಂದರೆ, ಈ ಚಿತ್ರದಲ್ಲಿ ಅವರು ಕೇವಲ ಸನ್ನೆ ಮೂಲಕ ನಟನೆ ಮಾಡಿದ್ದಾರೆ.
'ಕಾರ್ನಿ' ಎಂಬುದು ಸಂಸ್ಕೃತ ಪದವಾಗಿದ್ದು, ದೇವಿಯ ಆಯುಧದ ಹೆಸರಂತೆ. ಈ ಸಿನಿಮಾದಲ್ಲಿ ರಶ್ಮಿಗೆ ಯಾವುದೇ ಡೈಲಾಗ್ ಗಳು ಇಲ್ಲ. ಎರಡು ಸೀನ್ ಗಳನ್ನು ಬಿಟ್ಟರೆ ಇಡೀ ಸಿನಿಮಾ ಅವರು ಸೈಲೆಂಟ್ ಆಗಿ ಇರುತ್ತಾರಂತೆ.
ಅಂದಹಾಗೆ, ಎರಡು ವರ್ಷಗಳ ನಂತರ ಮತ್ತೆ ಸಿನಿಮಾ ಶುರು ಮಾಡಿರುವ ರಶ್ಮಿ ಅವರು ಈ ರೀತಿಯ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿನೋದ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ನಿರಂತ್ ನಾಯಕನಾಗಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ.