Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಯಾರ್ ಜೊತೆಗೂ ಮಾತಾಡುತ್ತಿಲ್ಲ ಯಾಕೆ?
ಸಾಮಾನ್ಯವಾಗಿ ಹುಡುಗಿರು ತುಂಬ ಮಾತಾನಾಡುತ್ತಾರೆ. ಆದರೆ, ನಟಿ ದುನಿಯಾ ರಶ್ಮಿ ಈಗ ಯಾರ್ ಜೊತೆಗೂ ಮಾತನಾಡುತ್ತಿಲ್ಲ. ಹಾಗಂತ ಅದು ರಿಯಲ್ ಲೈಫ್ ನಲ್ಲಿ ಅಲ್ಲ ಸಿನಿಮಾದಲ್ಲಿ ಮಾತ್ರ.
ರಶ್ಮಿ ಈಗ 'ಕಾರ್ನಿ' ಎಂಬ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಲೀಡ್ ರೋಲ್ ನಲ್ಲಿ ಅವರ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ವಿಭಿನ್ನ ಪಾತ್ರವನ್ನು ಅವರು ಪ್ರಯತ್ನ ಮಾಡಿದ್ದಾರೆ. ಯಾಕೆಂದರೆ, ಈ ಚಿತ್ರದಲ್ಲಿ ಅವರು ಕೇವಲ ಸನ್ನೆ ಮೂಲಕ ನಟನೆ ಮಾಡಿದ್ದಾರೆ.
'ಕಾರ್ನಿ' ಎಂಬುದು ಸಂಸ್ಕೃತ ಪದವಾಗಿದ್ದು, ದೇವಿಯ ಆಯುಧದ ಹೆಸರಂತೆ. ಈ ಸಿನಿಮಾದಲ್ಲಿ ರಶ್ಮಿಗೆ ಯಾವುದೇ ಡೈಲಾಗ್ ಗಳು ಇಲ್ಲ. ಎರಡು ಸೀನ್ ಗಳನ್ನು ಬಿಟ್ಟರೆ ಇಡೀ ಸಿನಿಮಾ ಅವರು ಸೈಲೆಂಟ್ ಆಗಿ ಇರುತ್ತಾರಂತೆ.
ಅಂದಹಾಗೆ, ಎರಡು ವರ್ಷಗಳ ನಂತರ ಮತ್ತೆ ಸಿನಿಮಾ ಶುರು ಮಾಡಿರುವ ರಶ್ಮಿ ಅವರು ಈ ರೀತಿಯ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿನೋದ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ನಿರಂತ್ ನಾಯಕನಾಗಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ.