Don't Miss!
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- News ಜಲ ಜೀವನ್ ಮಿಷನ್ ಯೋಜನೆ ವ್ಯರ್ಥ: ಈ ವೃದ್ದೆಗೆ ಕಣ್ಣೀರೇ ಗತಿ
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Automobiles ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಯಾರ್ ಜೊತೆಗೂ ಮಾತಾಡುತ್ತಿಲ್ಲ ಯಾಕೆ?
ಸಾಮಾನ್ಯವಾಗಿ ಹುಡುಗಿರು ತುಂಬ ಮಾತಾನಾಡುತ್ತಾರೆ. ಆದರೆ, ನಟಿ ದುನಿಯಾ ರಶ್ಮಿ ಈಗ ಯಾರ್ ಜೊತೆಗೂ ಮಾತನಾಡುತ್ತಿಲ್ಲ. ಹಾಗಂತ ಅದು ರಿಯಲ್ ಲೈಫ್ ನಲ್ಲಿ ಅಲ್ಲ ಸಿನಿಮಾದಲ್ಲಿ ಮಾತ್ರ.
ರಶ್ಮಿ ಈಗ 'ಕಾರ್ನಿ' ಎಂಬ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಲೀಡ್ ರೋಲ್ ನಲ್ಲಿ ಅವರ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ವಿಭಿನ್ನ ಪಾತ್ರವನ್ನು ಅವರು ಪ್ರಯತ್ನ ಮಾಡಿದ್ದಾರೆ. ಯಾಕೆಂದರೆ, ಈ ಚಿತ್ರದಲ್ಲಿ ಅವರು ಕೇವಲ ಸನ್ನೆ ಮೂಲಕ ನಟನೆ ಮಾಡಿದ್ದಾರೆ.
'ಕಾರ್ನಿ' ಎಂಬುದು ಸಂಸ್ಕೃತ ಪದವಾಗಿದ್ದು, ದೇವಿಯ ಆಯುಧದ ಹೆಸರಂತೆ. ಈ ಸಿನಿಮಾದಲ್ಲಿ ರಶ್ಮಿಗೆ ಯಾವುದೇ ಡೈಲಾಗ್ ಗಳು ಇಲ್ಲ. ಎರಡು ಸೀನ್ ಗಳನ್ನು ಬಿಟ್ಟರೆ ಇಡೀ ಸಿನಿಮಾ ಅವರು ಸೈಲೆಂಟ್ ಆಗಿ ಇರುತ್ತಾರಂತೆ.
ಅಂದಹಾಗೆ, ಎರಡು ವರ್ಷಗಳ ನಂತರ ಮತ್ತೆ ಸಿನಿಮಾ ಶುರು ಮಾಡಿರುವ ರಶ್ಮಿ ಅವರು ಈ ರೀತಿಯ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿನೋದ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ನಿರಂತ್ ನಾಯಕನಾಗಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ.