ಕಡೆಗೂ 'ಕೆಂಡಸಂಪಿಗೆ'ಗೆ ಸಿಕ್ತು ಬಿಡುಗಡೆ ಭಾಗ್ಯ
ದುನಿಯಾ ಸೂರಿ ನಿರ್ದೇಶನದ 'ಕೆಂಡಸಂಪಿಗೆ ಪಾರ್ಟ್-2 ಗಿಣಿಮರಿ ಕೇಸ್' ಮುಂದಿನ ತಿಂಗಳು ಅಂದ್ರೆ ಸೆಪ್ಟೆಂಬರ್ 4 ನೇ ತಾರೀಖು ರಾಜ್ಯಾದಂತ್ಯ ರಿಲೀಸ್ ಆಗುತ್ತಿದೆ.
ಎಲ್ಲವೂ ಸೂರಿ ಪ್ಲಾನ್ ಪ್ರಕಾರ ನಡೆದಿದ್ದರೆ, ಇಷ್ಟೊತ್ತಿಗಾಗಲೇ 'ಕೆಂಡಸಂಪಿಗೆ' ಬೆಳ್ಳಿತೆರೆ ಮೇಲೆ ರಾರಾಜಿಸಬೇಕಿತ್ತು. ಆದ್ರೆ, ಅನಿವಾರ್ಯ ಕಾರಣಗಳಿಂದ ಚಿತ್ರ ಪೋಸ್ಟ್ ಪೋನ್ ಆಗುತ್ತಲೇ ಇತ್ತು. [ದುನಿಯಾ ಸೂರಿ 'ಕೆಂಡಸಂಪಿಗೆ'ಯಲ್ಲಿ ಅಂಥದ್ದೇನಿದೆ..?]
ಇದೀಗ ಆರ್.ಎಸ್.ಪ್ರೊಡಕ್ಷನ್ಸ್ ಬ್ಯಾನರ್ ನ ನಿರ್ಮಾಪಕರಾದ ಕನಕಪುರ ಶ್ರೀನಿವಾಸ್ ಮತ್ತು ಕೆ.ಪಿ.ಶ್ರೀಕಾಂತ್ 'ಕೆಂಡಸಂಪಿಗೆ' ಚಿತ್ರದ ವಿತರಣಾ ಹಕ್ಕುಗಳನ್ನು ಪಡೆದುಕೊಂಡು, ಸೆಪ್ಟೆಂಬರ್ 4 ರಂದು ಸಿನಿಮಾ ರಿಲೀಸ್ ಮಾಡುವುದಕ್ಕೆ ನಿರ್ಧರಿಸಿದ್ದಾರೆ. [ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದ ಸೂರಿ 'ಕೆಂಡಸಂಪಿಗೆ']

ಈಗಾಗಲೇ ಸೆನ್ಸಾರ್ ಅಂಗಳದಿಂದ U/A ಸರ್ಟಿಫಿಕೇಟ್ ಪಡೆದು 'ಕೆಂಡಸಂಪಿಗೆ' ಪಾಸ್ ಆಗಿದೆ. ಪಕ್ಕಾ ಕ್ರೈಂ ಥ್ರಿಲ್ಲರ್ ಸಿನಿಮಾ ಆಗಿರುವ 'ಕೆಂಡಸಂಪಿಗೆ' ಚಿತ್ರದಲ್ಲಿ ಸಂತೋಷ್ ರೇವಾ ಮತ್ತು ಶ್ವೇತಾ ಕಾಮತ್ ಅಭಿನಯಿಸಿದ್ದಾರೆ. ಇಬ್ಬರಿಗೂ 'ಕೆಂಡಸಂಪಿಗೆ' ಮೊದಲ ಸಾಹಸ. ಉಳಿದಂತೆ ರಾಜೇಶ್ ನಟರಂಗ, ಪ್ರಕಾಶ್ ಬೆಳವಾಡಿ, ಚಂದ್ರಿಕಾ ತಾರಾಗಣದಲ್ಲಿದ್ದಾರೆ. [ಸೂರಿ ಕಾರು ಚಾಲಕ 'ಕೆಂಡಸಂಪಿಗೆ' ಹೀರೋ ಆದ ಕಥೆ]
ಒಂದು ಪ್ರೇಮಕಥೆ ಮತ್ತು ಕೊಲೆಯ ವಿಚಾರಣೆ ಸುತ್ತ ನಡೆಯುವ 7 ದಿನಗಳ ಜರ್ನಿ ಈ 'ಕೆಂಡಸಂಪಿಗೆ'. ಮುಂದಿನ ತಿಂಗಳು ರಿಲೀಸ್ ಆಗುತ್ತಿರುವ 'ಕೆಂಡಸಂಪಿಗೆ' ಚಿತ್ರವನ್ನ ನೋಡುವುದಕ್ಕೆ ನೀವು ರೆಡಿಯಾಗಿ.


Click it and Unblock the Notifications











