Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ಸೂರಿ 'ಕಡ್ಡಿಪುಡಿ' ಬಿಡುಗಡೆ ಮುಂದಕ್ಕೆ
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಡ್ಡಿಪುಡಿ ಚಿತ್ರ ಇದೇ ಮೇ 24ಕ್ಕೆ ತೆರೆಗೆ ಅಪ್ಪಳಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಕಡ್ಡಿಪುಡಿ ಒಂದು ವಾರ ತಡವಾಗುವ ಸಾಧ್ಯತೆಗಳಿವೆ ಎನ್ನುತ್ತವೆ ಮೂಲಗಳು. ಇದೇ ವಾರದಲ್ಲಿ ಸಾಕಷ್ಟು ಚಿತ್ರಗಳು ತೆರೆಕಾಣುತ್ತಿರುವುದೂ ಇದಕ್ಕೆ ಕಾರಣವಾಗಿರಬಹುದು.
ಈ ವಾರ ಮಾಲಾಶ್ರೀ ಅಭಿನಯದ ಎಲೆಕ್ಷನ್, ಲೂಸ್ ಮಾದ ಯೋಗೀಶ್ ಅಭಿನಯದ ಜಿಂಕೆಮರಿ ಹಾಗೂ ಮತ್ತೊಂದು ಚಿತ್ರ 'ಕಾವೇರಿನಗರ' ತೆರೆಗೆ ಜಿಗಿಯುತ್ತಿವೆ. ಈ ಎಲ್ಲಾ ಚಿತ್ರಗಳು ಕಡ್ಡಿಪುಡಿಗೆ ನೇರವಾಗಿ ಸ್ಪರ್ಧಿಯಲ್ಲದಿದ್ದರೂ. ಚಿತ್ರಮಂದಿರಗಳ ಕೊರತೆಯ ದೃಷ್ಟಿಯಿಂದ ಒಂದು ವಾರದ ಮಟ್ಟಿಗೆ ಮುಂದಕ್ಕೆ ಹಾಕಲಾಗಿದೆಯಂತೆ.
ಅರ್ಧ ಶತಕ, ಸೆಂಚುರಿ ಬಾರಿಸುವ ಚಿತ್ರಗಳ ಮೇಲೆ ಸೂರಿ ಅವರಿಗೆ ನಂಬಿಕೆ ಇಲ್ಲದಿದ್ದರೂ ಚಿತ್ರವೊಂದು ಲಾಭ ಮಾಡಿತೇ ಇಲ್ಲವೇ ಎಂಬುದಷ್ಟೇ ಅವರಿಗೆ ಮುಖ್ಯವಂತೆ. ಹಾಗಾಗಿ ಸೂರಿ ಅವರು ಈ ಬಾರಿ ಏನು ಮ್ಯಾಜಿಕ್ ಮಾಡಿದ್ದಾರೆ ಎಂಬ ಕುತೂಹಲ ಇದ್ದೇ ಇದೆ.
ಸ್ವಯಂವರ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. 'ಮುಂಗಾರುಮಳೆ' ಖ್ಯಾತಿಯ ಎಸ್ ಕೃಷ್ಣ ಅವರ ಛಾಯಾಗ್ರಹಣವಿದೆ. ರಂಗಾಯಣ ರಘು, ಅವಿನಾಶ್ ಹಾಗೂ ರೇಣು ಪ್ರಸಾದ್ ಅವರು ಪಾತ್ರವರ್ಗದಲ್ಲಿದ್ದಾರೆ. (ಏಜೆನ್ಸೀಸ್)