twitter
    For Quick Alerts
    ALLOW NOTIFICATIONS  
    For Daily Alerts

    ''ನಾಗರತ್ನ ಜೊತೆ ಬಾಳೋಕೆ ಸಾಧ್ಯವಿಲ್ಲ'' ಎಂದ ನಟ ದುನಿಯಾ ವಿಜಯ್.!

    |

    ಸ್ಯಾಂಡಲ್ ವುಡ್ ನ ಕರಿಚಿರತೆ ದುನಿಯಾ ವಿಜಯ್ ಫ್ಯಾಮಿಲಿ ರಂಪಾಟ ಇನ್ನೂ ಮುಗಿದಿಲ್ಲ. ನಟ ದುನಿಯಾ ವಿಜಯ್ ವಿರುದ್ಧ ಪತ್ನಿ ನಾಗರತ್ನ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದರು. ದೂರಿನ ಅನ್ವಯ ಇಂದು ವಿಚಾರಣೆಗೆ ಹಾಜರ್ ಆಗುವಂತೆ ದುನಿಯಾ ವಿಜಯ್ ಗೆ ನೋಟೀಸ್ ಜಾರಿ ಮಾಡಲಾಗಿತ್ತು.

    ಅದರಂತೆ ಇಂದು ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್ ಹಾಜರಾದರು. ವಿಚಾರಣೆ ಸಂದರ್ಭದಲ್ಲಿ ''ನಾಗರತ್ನ ಜೊತೆ ಬಾಳಲು ನನ್ನಿಂದ ಸಾಧ್ಯವಿಲ್ಲ'' ಎಂದು ದುನಿಯಾ ವಿಜಯ್ ಹೇಳಿದ್ದಾರಂತೆ. ಹಾಗಂತ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಹೇಳಿಕೆ ಕೊಟ್ಟಿದ್ದಾರೆ.

    ''ನನಗೆ ನ್ಯಾಯ ಕೊಡಿಸಿ'' ಎಂದು ಕೇಳಿಕೊಳ್ಳುತ್ತಿದ್ದಾರೆ ನಟ ದುನಿಯಾ ವಿಜಯ್.!''ನನಗೆ ನ್ಯಾಯ ಕೊಡಿಸಿ'' ಎಂದು ಕೇಳಿಕೊಳ್ಳುತ್ತಿದ್ದಾರೆ ನಟ ದುನಿಯಾ ವಿಜಯ್.!

    Duniya Vijay appears before Karnataka State Commission for Women

    ''ನಾಗರತ್ನ ಜೊತೆ ಬಾಳೋಕೆ ಸಾಧ್ಯವಿಲ್ಲ. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ'' ಎಂದು ದುನಿಯಾ ವಿಜಯ್ ಹೇಳಿದರು. ಜೀವನಾಂಶ ನೀಡಿರುವುದಕ್ಕೆ ದಾಖಲೆ ಕೊಡಿ ಎಂದು ಕೇಳಿದ್ದೇವೆ'' ಅಂತ ಮಾಧ್ಯಮಗಳ ಮುಂದೆ ನಾಗಲಕ್ಷ್ಮಿ ಹೇಳಿದರು.

    ನಾಗರತ್ನರಿಂದ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆಹೋದ ದುನಿಯಾ ವಿಜಯ್.!ನಾಗರತ್ನರಿಂದ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆಹೋದ ದುನಿಯಾ ವಿಜಯ್.!

    ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿ ದುನಿಯಾ ವಿಜಯ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗ, ಇಬ್ಬರು ಹೆಂಡತಿಯರಾದ ನಾಗರತ್ನ ಮತ್ತು ಕೀರ್ತಿ ಗೌಡ ಕಿತ್ತಾಡಿಕೊಂಡಿದ್ದರು. ಕೀರ್ತಿ ಗೌಡ ಮೇಲೆ ನಾಗರತ್ನ ಚಪ್ಪಲಿಯಿಂದ ಹಲ್ಲೆ ನಡೆಸಿದ್ದರು. ಇದಾದ ಬಳಿಕ ನಾಗರತ್ನ ಮಹಿಳಾ ಆಯೋಗದ ಮೊರೆ ಹೋಗಿದ್ದರು.

    English summary
    Kannada Actor Duniya Vijay appears before Karnataka State Commission for Women.
    Friday, February 22, 2019, 18:44
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X