Don't Miss!
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಾಗರತ್ನ ಜೊತೆ ಬಾಳೋಕೆ ಸಾಧ್ಯವಿಲ್ಲ'' ಎಂದ ನಟ ದುನಿಯಾ ವಿಜಯ್.!
ಸ್ಯಾಂಡಲ್ ವುಡ್ ನ ಕರಿಚಿರತೆ ದುನಿಯಾ ವಿಜಯ್ ಫ್ಯಾಮಿಲಿ ರಂಪಾಟ ಇನ್ನೂ ಮುಗಿದಿಲ್ಲ. ನಟ ದುನಿಯಾ ವಿಜಯ್ ವಿರುದ್ಧ ಪತ್ನಿ ನಾಗರತ್ನ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದರು. ದೂರಿನ ಅನ್ವಯ ಇಂದು ವಿಚಾರಣೆಗೆ ಹಾಜರ್ ಆಗುವಂತೆ ದುನಿಯಾ ವಿಜಯ್ ಗೆ ನೋಟೀಸ್ ಜಾರಿ ಮಾಡಲಾಗಿತ್ತು.
ಅದರಂತೆ ಇಂದು ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್ ಹಾಜರಾದರು. ವಿಚಾರಣೆ ಸಂದರ್ಭದಲ್ಲಿ ''ನಾಗರತ್ನ ಜೊತೆ ಬಾಳಲು ನನ್ನಿಂದ ಸಾಧ್ಯವಿಲ್ಲ'' ಎಂದು ದುನಿಯಾ ವಿಜಯ್ ಹೇಳಿದ್ದಾರಂತೆ. ಹಾಗಂತ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಹೇಳಿಕೆ ಕೊಟ್ಟಿದ್ದಾರೆ.
''ನನಗೆ ನ್ಯಾಯ ಕೊಡಿಸಿ'' ಎಂದು ಕೇಳಿಕೊಳ್ಳುತ್ತಿದ್ದಾರೆ ನಟ ದುನಿಯಾ ವಿಜಯ್.!
''ನಾಗರತ್ನ ಜೊತೆ ಬಾಳೋಕೆ ಸಾಧ್ಯವಿಲ್ಲ. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ'' ಎಂದು ದುನಿಯಾ ವಿಜಯ್ ಹೇಳಿದರು. ಜೀವನಾಂಶ ನೀಡಿರುವುದಕ್ಕೆ ದಾಖಲೆ ಕೊಡಿ ಎಂದು ಕೇಳಿದ್ದೇವೆ'' ಅಂತ ಮಾಧ್ಯಮಗಳ ಮುಂದೆ ನಾಗಲಕ್ಷ್ಮಿ ಹೇಳಿದರು.
ನಾಗರತ್ನರಿಂದ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆಹೋದ ದುನಿಯಾ ವಿಜಯ್.!
ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿ ದುನಿಯಾ ವಿಜಯ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗ, ಇಬ್ಬರು ಹೆಂಡತಿಯರಾದ ನಾಗರತ್ನ ಮತ್ತು ಕೀರ್ತಿ ಗೌಡ ಕಿತ್ತಾಡಿಕೊಂಡಿದ್ದರು. ಕೀರ್ತಿ ಗೌಡ ಮೇಲೆ ನಾಗರತ್ನ ಚಪ್ಪಲಿಯಿಂದ ಹಲ್ಲೆ ನಡೆಸಿದ್ದರು. ಇದಾದ ಬಳಿಕ ನಾಗರತ್ನ ಮಹಿಳಾ ಆಯೋಗದ ಮೊರೆ ಹೋಗಿದ್ದರು.