Don't Miss!
- News Namma Metro Service Extension: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ರಂಪಾಟದ ಬಗ್ಗೆ ನಿರ್ಮಾಪಕ ಮುನಿರತ್ನ ಮಾಡಿದ ಕಾಮೆಂಟ್ ಏನು.?
ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಕನ್ನಡ ಚಿತ್ರರಂಗದ ನಾಯಕ ದುನಿಯಾ ವಿಜಯ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಮುದ್ದೆ ಮುರಿಯುವ ಹಾಗಾಗಿದೆ.
ಸದ್ಯ ಮೂವರ ಜೊತೆಗೆ ಜೈಲು ಪಾಲಾಗಿರುವ ದುನಿಯಾ ವಿಜಯ್ ಗೆ ಜಾಮೀನು ಸಿಗುತ್ತೋ, ಇಲ್ವೋ ಗೊತ್ತಿಲ್ಲ. ಆದ್ರೆ, ನಟರು ಈ ರೀತಿ ಬೀದಿಯಲ್ಲಿ ಜಗಳ ಮಾಡಿಕೊಳ್ಳಬಾರದು ಎಂದು ನಿರ್ಮಾಪಕ ಮುನಿರತ್ನ ಹೇಳಿದ್ದಾರೆ.
ಮಾರುತಿ ಗೌಡ ಮೇಲೆ ದುನಿಯಾ ವಿಜಯ್ ಹಲ್ಲೆಗೆ ಅಸಲಿ ಕಾರಣ ಏನು.?
''ಅಭಿಮಾನಿಗಳಿಗೆ, ನಟರು ಆದರ್ಶಪ್ರಾಯವಾಗಿರಬೇಕು. ಕನ್ನಡ ಚಿತ್ರರಂಗ ಅಂದರೇ ಡಾ.ರಾಜ್ ಹಾಗೂ ಡಾ.ವಿಷ್ಣುವರ್ಧನ್ ನೆನಪಾಗುತ್ತಾರೆ. ಚಿತ್ರರಂಗದ ನಟರು ಸೂಕ್ಷ್ಮ ಮಾತುಗಳನ್ನಾಡಬೇಕು. ಈ ರೀತಿ ಬೀದಿಯಲ್ಲಿ ಜಗಳವಾಡಿಕೊಂಡು ನಿಲ್ಲಬಾರದು. ರಾಜ್, ವಿಷ್ಣು ರವರ ಅದೆಷ್ಟೋ ಚಿತ್ರಗಳು ಇಂದಿಗೂ ಮಾದರಿಯಾಗಿದೆ. ಅವರನ್ನು ನೋಡಿ ಕಲಿಯಬೇಕೇ ವಿನಃ ಈ ರೀತಿ ಬೀದಿ ಜಗಳವನ್ನಲ್ಲ'' ಎಂದು ನಿರ್ಮಾಪಕ ಮುನಿರತ್ನ ಬೇಸರ ವ್ಯಕ್ತಪಡಿಸಿದರು.
ದುನಿಯಾ ವಿಜಯ್ ಇದೀಗ ವಿಚಾರಣಾಧೀನ ಖೈದಿ ನಂಬರ್ 9035.!
ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ''ನಾನು ಸಹ ನಿರ್ಮಾಪಕರ ಸಂಘದಿಂದ ಸಭೆ ಕರೆಯುತ್ತೇನೆ. ನಾನು ಮತ್ತು ಅಂಬರೀಶ್ ಜೊತೆಯಲ್ಲಿ ಕುಳಿತು ವಿಜಯ್ ಮತ್ತು ಕಿಟ್ಟಿಯನ್ನು ಕರೆಸಿ ಮಾತಾಡುತ್ತೇವೆ. ಅವರಿಬ್ಬರ ಬಳಿ ಮಾತನಾಡಿದ ಮೇಲೆ ಮತ್ತೆ ಸ್ನೇಹ ಚಿಗುರುವಂತೆ ಮಾಡುತ್ತೇನೆ. ದುನಿಯಾ ವಿಜಯ್ ಇದರಿಂದ ಹೊರಗೆ ಬಂದು ಒಳ್ಳೆಯ ಚಿತ್ರ ಮಾಡಲಿ. ಅವರ ಅಭಿಮಾನಿಗಳಿಗೆ ನಿರಾಸೆಯಾಗುವಂತೆ ನಡೆದುಕೊಳ್ಳದೇ ಇರಲಿ'' ಅಂತ ಹೇಳಿದರು ನಿರ್ಮಾಪಕ ಮುನಿರತ್ನ.