ಚಿತ್ರರಂಗದಿಂದ ದುನಿಯಾ ವಿಜಿ ಬಹಿಷ್ಕಾರ ಸಾಧ್ಯವಿಲ್ಲ
Recommended Video

ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಕಿಡ್ನ್ಯಾಪ್ ಮತ್ತು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ವಿರುದ್ಧ ಪಾನಿಪುರಿ ಕಿಟ್ಟಿ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು.
ವಿಜಿ ಅವರನ್ನ ಸಿನಿಮಾರಂಗದಿಂದ ನಿಷೇಧ ಮಾಡುವಂತೆ ಒತ್ತಾಯ ಮಾಡಿ ದೂರು ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ''ವಿಜಿ ಅವರನ್ನ ಚಿತ್ರರಂಗದಿಂದ ಬಹುಷ್ಕಾರ ಮಾಡಲು ಸಾಧ್ಯವಿಲ್ಲ'' ಎಂದಿದ್ದಾರೆ.
''ದುನಿಯಾ ವಿಜಿ ಪ್ರಕರಣ ಕೊರ್ಟ್ ನಲ್ಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದು ಅವರ ವೈಯಕ್ತಿಕ ವಿಚಾರ ಆಗಿರುವುದರಿಂದ ಚಿತ್ರರಂಗದಿಂದ ಬಹಿಷ್ಕಾರ ಸಾಧ್ಯವಿಲ್ಲ'' ಎಂದು ಚಿನ್ನೇಗೌಡ ತಿಳಿಸಿದ್ದಾರೆ.

ಇದಕ್ಕೂ ಮುಂಚೆ ಫಿಲ್ಮ್ ಚೇಂಬರ್ ಉಪಾಧ್ಯಕ್ಷ ಕೆ ಮಂಜು ಮತ್ತು ಕಾರ್ಯದರ್ಶಿ ಭಾಮಾ ಹರೀಶ್ ಅವರ ಜೊತೆ ಪಾನಿಪುರಿ ಕಿಟ್ಟಿ ಚರ್ಚೆ ಮಾಡಿದ್ದರು.
ಸದ್ಯ, 8ನೇ ಎಸಿಎಂಎಂ ಕೋರ್ಟ್ ನಲ್ಲಿ ದುನಿಯಾ ವಿಜಯ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಆದೇಶವನ್ನ ಸೆಪ್ಟೆಂಬರ್ 26ಕ್ಕೆ ಕಾಯ್ದಿರಿಸಿದೆ.
ಹೀಗಾಗಿ, ಇನ್ನು ಎರಡು ದಿನಗಳ ಕಾಲ ನಟ ದುನಿಯಾ ವಿಜಿ ಮತ್ತು ಸ್ನೇಹಿತರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಗೃಹದಲ್ಲೇ ಇರೇಕಾಗಿದೆ.


Click it and Unblock the Notifications











