Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದಿಂದ ದುನಿಯಾ ವಿಜಿ ಬಹಿಷ್ಕಾರ ಸಾಧ್ಯವಿಲ್ಲ
Recommended Video
ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಕಿಡ್ನ್ಯಾಪ್ ಮತ್ತು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ವಿರುದ್ಧ ಪಾನಿಪುರಿ ಕಿಟ್ಟಿ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು.
ವಿಜಿ ಅವರನ್ನ ಸಿನಿಮಾರಂಗದಿಂದ ನಿಷೇಧ ಮಾಡುವಂತೆ ಒತ್ತಾಯ ಮಾಡಿ ದೂರು ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ''ವಿಜಿ ಅವರನ್ನ ಚಿತ್ರರಂಗದಿಂದ ಬಹುಷ್ಕಾರ ಮಾಡಲು ಸಾಧ್ಯವಿಲ್ಲ'' ಎಂದಿದ್ದಾರೆ.
''ದುನಿಯಾ ವಿಜಿ ಪ್ರಕರಣ ಕೊರ್ಟ್ ನಲ್ಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದು ಅವರ ವೈಯಕ್ತಿಕ ವಿಚಾರ ಆಗಿರುವುದರಿಂದ ಚಿತ್ರರಂಗದಿಂದ ಬಹಿಷ್ಕಾರ ಸಾಧ್ಯವಿಲ್ಲ'' ಎಂದು ಚಿನ್ನೇಗೌಡ ತಿಳಿಸಿದ್ದಾರೆ.
ಇಂದು ವಿಚಾರಣಾಧೀನ ಖೈದಿಗಳ ಕೊಠಡಿಗೆ ವಿಜಯ್ ಅಂಡ್ ಗ್ಯಾಂಗ್ ಶಿಫ್ಟ್.!
ಇದಕ್ಕೂ ಮುಂಚೆ ಫಿಲ್ಮ್ ಚೇಂಬರ್ ಉಪಾಧ್ಯಕ್ಷ ಕೆ ಮಂಜು ಮತ್ತು ಕಾರ್ಯದರ್ಶಿ ಭಾಮಾ ಹರೀಶ್ ಅವರ ಜೊತೆ ಪಾನಿಪುರಿ ಕಿಟ್ಟಿ ಚರ್ಚೆ ಮಾಡಿದ್ದರು.
ಯಾರೀ ದುನಿಯಾ ವಿಜಯ್ ದುಷ್ಮನ್ 'ಪಾನಿಪೂರಿ' ಕಿಟ್ಟಿ.?
ಸದ್ಯ, 8ನೇ ಎಸಿಎಂಎಂ ಕೋರ್ಟ್ ನಲ್ಲಿ ದುನಿಯಾ ವಿಜಯ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಆದೇಶವನ್ನ ಸೆಪ್ಟೆಂಬರ್ 26ಕ್ಕೆ ಕಾಯ್ದಿರಿಸಿದೆ.
ಹೀಗಾಗಿ, ಇನ್ನು ಎರಡು ದಿನಗಳ ಕಾಲ ನಟ ದುನಿಯಾ ವಿಜಿ ಮತ್ತು ಸ್ನೇಹಿತರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಗೃಹದಲ್ಲೇ ಇರೇಕಾಗಿದೆ.