Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇಕಾರರ ಪರವಾಗಿ ಹೊಸ ಚಾಲೆಂಜ್ ಆರಂಭಿಸಿದ ದುನಿಯಾ ವಿಜಯ್
ಕೊರೊನಾ ವೈರಸ್ ಬಂದ್ಮೇಲೆ ಎಲ್ಲ ಕ್ಷೇತ್ರದ ಜನರಿಗೂ ಕಷ್ಟ ಎದುರಾಗಿದೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯಮ ಸ್ಥಗಿತ ಆಯಿತು. ಆರ್ಥಿಕವಾಗಿ ಭಾರಿ ಹಿನ್ನಡೆ ಆಗಿದೆ. ಹೀಗೆ, ಕೊವಿಡ್ ಕಾಟಕ್ಕೆ ನಲುಗಿದವರ ಪೈಕಿ ನೇಕಾರರು ಸಮೂಹವೂ ಸಹ ಒಂದು.
ನೇಕಾರರ ತಯಾರಿಸಿರುವ ಬಟ್ಟೆಗಳನ್ನು ಖರೀದಿಸಿ, ಈ ಮೂಲಕ ನೇಕಾರರಿಗೆ ಒಳ್ಳೆಯದಾಗುತ್ತೆ, ನಮ್ಮ ನೆಲದ ಸಂಸ್ಕೃತಿಯನ್ನು ಪ್ರತಿನಿಧಿಸಿ ಎಂದು ನಟ ದುನಿಯಾ ವಿಜಯ್ ಮನವಿ ಮಾಡಿದ್ದಾರೆ.
ಹಿಂದಿ ಹೇರಿಕೆಗೆ ಖಂಡನೆ: 'ಹುಟ್ಟಿದಾಗಿನಿಂದ ಗೊತ್ತಿರುವುದು ಕನ್ನಡ ಒಂದೇ' ಎಂದ ವಿಜಯ್
''ನಾವು ಮಾತಾಡೋ ಭಾಷೆ ಕನ್ನಡ, ಕುಡಿಯೋ ನೀರು ಕಾವೇರಿ ನಿಂತಿರೋ ನೆಲ ಕರ್ನಾಟಕವಾಗಿರೋವಾಗ. ನಾವು ಹಾಕೋ ಬಟ್ಟೆ ಕೂಡ ಕನ್ನಡವಾಗಿರಬೇಕು. ಇದು ನಮ್ಮ ಜನ ನಮ್ಮ ನೆಲದಲ್ಲಿ ಬೆಳೆದ ಹತ್ತಿಯಿಂದ ಚರಕದಲ್ಲಿ ನೂಲು ತೆಗೆದು ಕೈಮಗ್ಗದಲ್ಲಿ ನೇಯ್ದ ಬಟ್ಟೆ ನಮ್ಮ ಜನರ ಬೆವರಿನ ಫಲ''.
''ಕೊರೊನಾ ಪಿಡುಗು ಶುರುವಾದಾಗಿನಿಂದ ದೇಸಿ ಸಂಸ್ಥೆಯ ನೇಕಾರರು ತಯಾರಿಸುವ ಬಟ್ಟೆ ಸುಮಾರಿದೆ. ಹನಿಹನಿಗೂಡಿದರೆ ಹಳ್ಳ ಅನ್ನೋ ಹಾಗೆ ನೀವೆಲ್ಲರೂ ಒಂದೊಂದು ಬಟ್ಟೆ ಖರೀದಿಸಿದರೂ ನಮ್ಮ ನೇಕಾರರ ಬೆವರಿನ ದುಡಿಮೆಗೆ ಹೆಗಲಾಗಿ ನಿಂತಂತೆ''.
Recommended Video
''ಬನ್ನಿ ಸೌತ್ ಎಂಡ್ ಸರ್ಕಲ್, ಸೀತಾಸರ್ಕಲ್, ಕೆಂಗೇರಿ ಮತ್ತು ಮಲ್ಲೇಶ್ವರಂನ 'ದೇಸಿ' ಅಂಗಡಿಗಳಲ್ಲಿ ಕೈಮಗ್ಗದ ಬಟ್ಟೆಗಳನ್ನು ಕೊಳ್ಳೋಣ. ನಮ್ಮತನವನ್ನು ಉಳಿಸಿಕೊಳ್ಳೋಣ'' ಎಂದು ದುನಿಯಾ ವಿಜಯ್ ವಿನಂತಿಸಿದ್ದಾರೆ.