Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇಕಾರರ ಪರವಾಗಿ ಹೊಸ ಚಾಲೆಂಜ್ ಆರಂಭಿಸಿದ ದುನಿಯಾ ವಿಜಯ್
ಕೊರೊನಾ ವೈರಸ್ ಬಂದ್ಮೇಲೆ ಎಲ್ಲ ಕ್ಷೇತ್ರದ ಜನರಿಗೂ ಕಷ್ಟ ಎದುರಾಗಿದೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯಮ ಸ್ಥಗಿತ ಆಯಿತು. ಆರ್ಥಿಕವಾಗಿ ಭಾರಿ ಹಿನ್ನಡೆ ಆಗಿದೆ. ಹೀಗೆ, ಕೊವಿಡ್ ಕಾಟಕ್ಕೆ ನಲುಗಿದವರ ಪೈಕಿ ನೇಕಾರರು ಸಮೂಹವೂ ಸಹ ಒಂದು.
ನೇಕಾರರ ತಯಾರಿಸಿರುವ ಬಟ್ಟೆಗಳನ್ನು ಖರೀದಿಸಿ, ಈ ಮೂಲಕ ನೇಕಾರರಿಗೆ ಒಳ್ಳೆಯದಾಗುತ್ತೆ, ನಮ್ಮ ನೆಲದ ಸಂಸ್ಕೃತಿಯನ್ನು ಪ್ರತಿನಿಧಿಸಿ ಎಂದು ನಟ ದುನಿಯಾ ವಿಜಯ್ ಮನವಿ ಮಾಡಿದ್ದಾರೆ.
ಹಿಂದಿ ಹೇರಿಕೆಗೆ ಖಂಡನೆ: 'ಹುಟ್ಟಿದಾಗಿನಿಂದ ಗೊತ್ತಿರುವುದು ಕನ್ನಡ ಒಂದೇ' ಎಂದ ವಿಜಯ್
''ನಾವು ಮಾತಾಡೋ ಭಾಷೆ ಕನ್ನಡ, ಕುಡಿಯೋ ನೀರು ಕಾವೇರಿ ನಿಂತಿರೋ ನೆಲ ಕರ್ನಾಟಕವಾಗಿರೋವಾಗ. ನಾವು ಹಾಕೋ ಬಟ್ಟೆ ಕೂಡ ಕನ್ನಡವಾಗಿರಬೇಕು. ಇದು ನಮ್ಮ ಜನ ನಮ್ಮ ನೆಲದಲ್ಲಿ ಬೆಳೆದ ಹತ್ತಿಯಿಂದ ಚರಕದಲ್ಲಿ ನೂಲು ತೆಗೆದು ಕೈಮಗ್ಗದಲ್ಲಿ ನೇಯ್ದ ಬಟ್ಟೆ ನಮ್ಮ ಜನರ ಬೆವರಿನ ಫಲ''.
''ಕೊರೊನಾ ಪಿಡುಗು ಶುರುವಾದಾಗಿನಿಂದ ದೇಸಿ ಸಂಸ್ಥೆಯ ನೇಕಾರರು ತಯಾರಿಸುವ ಬಟ್ಟೆ ಸುಮಾರಿದೆ. ಹನಿಹನಿಗೂಡಿದರೆ ಹಳ್ಳ ಅನ್ನೋ ಹಾಗೆ ನೀವೆಲ್ಲರೂ ಒಂದೊಂದು ಬಟ್ಟೆ ಖರೀದಿಸಿದರೂ ನಮ್ಮ ನೇಕಾರರ ಬೆವರಿನ ದುಡಿಮೆಗೆ ಹೆಗಲಾಗಿ ನಿಂತಂತೆ''.
Recommended Video
''ಬನ್ನಿ ಸೌತ್ ಎಂಡ್ ಸರ್ಕಲ್, ಸೀತಾಸರ್ಕಲ್, ಕೆಂಗೇರಿ ಮತ್ತು ಮಲ್ಲೇಶ್ವರಂನ 'ದೇಸಿ' ಅಂಗಡಿಗಳಲ್ಲಿ ಕೈಮಗ್ಗದ ಬಟ್ಟೆಗಳನ್ನು ಕೊಳ್ಳೋಣ. ನಮ್ಮತನವನ್ನು ಉಳಿಸಿಕೊಳ್ಳೋಣ'' ಎಂದು ದುನಿಯಾ ವಿಜಯ್ ವಿನಂತಿಸಿದ್ದಾರೆ.