Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾನಿಪುರಿ ಕಿಟ್ಟಿ ಮೇಲೂ ಬಿತ್ತು ಕೇಸ್: ಕಿಟ್ಟಿಗೂ ಎದುರಾಯ್ತು ಸಂಕಷ್ಟ
Recommended Video
ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮತ್ತು ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದುನಿಯಾ ವಿಜಯ್, ಪ್ರಸಾದ್ ಸೇರಿದಂತೆ ನಾಲ್ಕು ಜನ ಬಂಧನವಾಗಿದ್ದು, ಕೇಂದ್ರ ಕಾರಗೃಹದಲ್ಲಿದ್ದಾರೆ.
ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗ ಮಾರುತಿ ಗೌಡ ಅವರ ಸೂಚನೆಯಿಂತೆ ಕಿಟ್ಟಿ ದೂರು ದಾಖಲಿಸಿದ್ದರು. ಆದ್ರೀಗ, ಕಿಟ್ಟಿ ಮೇಲೂ ಕೇಸ್ ಬಿದ್ದಿದೆ.
ಯಾರೀ ದುನಿಯಾ ವಿಜಯ್ ದುಷ್ಮನ್ 'ಪಾನಿಪೂರಿ' ಕಿಟ್ಟಿ.?
ಕಿಟ್ಟಿ ವಿರುದ್ಧದ ದೂರಿನ ಅನ್ವಯ ಎಫ್.ಐ.ಆರ್ ಕೂಡ ದಾಖಲಾಗಿದ್ದು, ಬಹುಶಃ ಕಿಟ್ಟಿಗೂ ಸಂಕಷ್ಟ ಎದುರಾಗಲಿದೆ. ಅಷ್ಟಕ್ಕೂ, ಪಾನಿಪೂರಿ ಕಿಟ್ಟಿ ದೂರು ನೀಡಿದ್ದು ಯಾರು.? ಯಾವ ಕಾರಣಕ್ಕಾಗಿ ದೂರು ನೀಡಲಾಗಿದೆ.? ಏನಿದೆ ಎಫ್.ಐ.ಆರ್ ಪ್ರತಿಯಲ್ಲಿ ಎಂದು ಮುಂದೆ ಓದಿ.....
ದುನಿಯಾ ವಿಜಿ ನೀಡಿದ ದೂರು
ಪಾನಿಪುರಿ ಕಿಟ್ಟಿ ಅವರು ವಿಜಿ ವಿರುದ್ಧ ದೂರು ನೀಡಿದ ಮೇಲೆ, ಈಗ ವಿಜಿ ಕಡೆಯಿಂದ ಕಿಟ್ಟಿ ಮೇಲೂ ಕೇಸ್ ದಾಖಲಾಗಿದೆ. ಕೊಲೆ ಬೆದರಿಕೆ, ಜೀವ ಬೆದರಿಕೆ ಹಾಗೂ ಹಲ್ಲೆ ಮಾಡಿದ್ದಾರೆ, ನನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ವಿಜಿ ದೂರು ನೀಡಿದ್ದಾರೆ.
ಮಾರುತಿ ಗೌಡ ಮೇಲೆ ದುನಿಯಾ ವಿಜಯ್ ಹಲ್ಲೆಗೆ ಅಸಲಿ ಕಾರಣ ಏನು.?
ಏನಿದೆ ದೂರಿನಲ್ಲಿ.?
''ಕಾನೂನಿನ ಬೆಲೆ ಕೊಟ್ಟು, ಪೊಲೀಸರ ಮಾತಿಗೆ ಗೌರವ ಕೊಟ್ಟು ಮಾರುತಿ ಎಂಬುವವರನ್ನ ಠಾಣೆಯ ಬಳಿ ಕರೆದುಕೊಂಡು ಬಂದಾಗ, ನನ್ನನ್ನು ಅಡ್ಡಗಟ್ಟಿ ಪಾನಿಪುರಿ ಕಿಟ್ಟಿ ಮತ್ತು ಸಹೋದರರು ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆಯೊಡ್ಡಿದ್ದಾರೆ. ಠಾಣೆ ಬಳಿ ಬಂದಾಗ ನನಗೆ ಡಿಚ್ಚಿ ಹೊಡೆದಿದ್ದಾನೆ''
ದುನಿಯಾ ವಿಜಿ-ಪಾನಿಪುರಿ ಕಿಟ್ಟಿ ಮಧ್ಯೆ ಇರೋ ಈ 'ಪ್ರಸಾದ್' ಯಾರು.?
ಕೊಲೆ ಪ್ರಯತ್ನ ಮಾಡಲಾಗಿದೆ
''ಪಾನಿಪುರಿ ಕಿಟ್ಟಿ ಮತ್ತು ಸಹಚರರು ಚಾಕುವಿನಿಂದ ಚುಚ್ಚಲು ಬಂದಿದ್ದರು. ಮಾರುತಿ ಬಂದು ಹೆದರಿಸಿದ್ದಾನೆ. ನನ್ನ ಮಗನಿಗೆ ಕೂಡ ಎದುರಿಸಿದ್ದಾನೆ. ಪಾನಿಪುರಿ ಕಿಟ್ಟಿ ಕೂಡ ಫೋನ್ ಮಾಡಿ ಧಮ್ಕಿ ಹಾಕಿದ್ದಾರೆ. ಕಾರು ಜಖಂ ಮಾಡಿದ್ದಾರೆ. ಅಪರಿಚತ ವ್ಯಕ್ತಿಯೊಬ್ಬ ಕೊಲ್ಲಲು ಮುಂದೆ ಬಂದಿದ್ದ. ದಯವಿಟ್ಟು ನನಗೆ ರಕ್ಷಣೆ ಕೊಡಿ ಮತ್ತು ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ'' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
'ತನ್ನ ಶ್ರಮವನ್ನ ಗಾಳಿಗೆ ತೂರಿಬಿಟ್ಟ ದುನಿಯಾ ವಿಜಿ' - ಜಗ್ಗೇಶ್ ಬೇಸರ
ಕಾನೂನಾತ್ಮಕವಾಗಿ ಹೋರಾಟ
ವಿಜಿ ಅವರ ದೂರಿನ ಹಿನ್ನೆಲೆ ಕಿಟ್ಟಿ ಅವರನ್ನ ಕರೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ನಂತರ ಪೊಲೀಸರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಕಿಟ್ಟಿ ಈ ದೂರು ಸಂಪೂರ್ಣ ಸುಳ್ಳು, ನಾನು ಕಾನೂನಾತ್ಮಕವಾಗಿ ಹೋರಾಟ ಮಾಡ್ತೀನಿ ಎಂದರು.
ಪಾನಿಪುರಿ ಕಿಟ್ಟಿ ಜೊತೆಗಿನ 20 ವರ್ಷದ 'ಸೇಡು-ಸ್ನೇಹ'ದ ಕಥೆ ಬಿಚ್ಚಿಟ್ಟಿದ್ದ ವಿಜಿ