Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಮೊದಲ ಪತ್ನಿಯಿಂದ ಮತ್ತೊಂದು ದೂರು ದಾಖಲು.!
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಸಹೋದರನ ಮಗ ಮಾರುತಿ ಗೌಡ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟ ದುನಿಯಾ ವಿಜಯ್ ಬಂಧನವಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣವೇನು.? ಯಾಕೆ ಗಲಾಟೆ ಮಾಡಲಾಯಿತು ಎಂಬುದನ್ನ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಹೀಗಿರುವಾಗ, ದುನಿಯಾ ವಿಜಯ್ ವೈಯಕ್ತಿಕ ಜೀವನದಲ್ಲಿ ಮತ್ತೊಂದು ಕಂಟಕ ಎದುರಾಗಿದೆ. ವಿಜಿ ಅವರ ಮೊದಲ ಪತ್ನಿ ನಾಗರತ್ನ ಅವರಿಂದ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ವಿಜಿ ಸಂಸಾರದಲ್ಲಿ ಹುಳಿ ಹಿಂಡೋಕೆ ಹೊರಟ ರಿಪೋರ್ಟರ್
ಕೌಟುಂಬಿಕ ವಿಚಾರಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಪತ್ನಿಯರ ನಡುವೆ ಮನಸ್ತಾಪ ಉಂಟಾಗಿದ್ದು, ಈಗ ಪೊಲಿಸ್ ಠಾಣೆಯ ಮೆಟ್ಟೇಲೇರಿದೆ. ಈಗ ನಾಗರತ್ನ ಮತ್ತು ಕೀರ್ತಿಗೌಡ ಇಬ್ಬರನ್ನ ಸ್ಟೇಷನ್ ಗೆ ಕರೆಯಿಸಿ ವಿಚಾರಣೆ ಮಾಡಲಾಗುತ್ತಿದೆ. ಅಷ್ಟಕ್ಕೂ, ನಾಗರತ್ನ ದೂರು ನೀಡಿದ್ದೇಕೆ.? ಮುಂದೆ ಓದಿ....
ಕೀರ್ತಿಗೌಡ ವಿರುದ್ಧ ದೂರು
ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಅವರು ವಿರುದ್ಧ ಮೊದಲನೇ ಪತ್ನಿ ನಾಗರತ್ನ ಅವರು ದೂರು ನೀಡಿದ್ದಾರೆ. ಮಕ್ಕಳನ್ನ ನೋಡಲು ಮನೆ ಬಳಿ ಹೋಗಿದ್ದಾಗ ನನ್ನ ಮೇಲೆ ಬೌನ್ಸರ್ ಗಳನ್ನ ಬಿಟ್ಟು ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
ಚಿತ್ರಗಳು: ಹೊಸ ಹೆಂಡ್ತಿ ಕೀರ್ತಿ ಜೊತೆ ದುನಿಯಾ ವಿಜಿ ಸಂಸಾರ ಸರಿಗಮ
ಎಫ್.ಐ.ಆರ್ ದಾಖಲು.!
ದುನಿಯಾ ವಿಜಯ್ ಅವರ ಮೊದಲನೇ ಪತ್ನಿ ನಾಗರತ್ನ ಅವರು ನೀಡಿರುವ ದೂರಿನ ಅನ್ವಯ ಸೆಕ್ಷನ್ 323, 504, 506, 34ರ ಅಡಿ ಎಫ್.ಐ.ಆರ್ ದಾಖಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೀರ್ತಿಗೌಡ ಅವರನ್ನ ಠಾಣೆಗೆ ಕರೆಯಿಸಿ ವಿಚಾರಣೆ ಮಾಡ್ತಿದ್ದಾರೆ.
ಮಾರುತಿ ಗೌಡ ಘಟನೆ ವೇಳೆ ಮಗ ಇದ್ದ.!
ಇನ್ನು ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿದ ಸಂದರ್ಭದಲ್ಲಿ ದುನಿಯಾ ವಿಜಯ್ ಅವರ ಮಗ ಕೂಡ ಇದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೀರ್ತಿ ಗೌಡ ಅವರ ಬಳಿ ನಾಗರತ್ನ ಅವರು ಪ್ರಶ್ನಿಸಿದ್ದಾರೆ. ನನ್ನ ಮಗನನ್ನ ನೀವು ಹಾಳು ಮಾಡುತ್ತಿದ್ದೀರಾ ಎಂದು ಕೇಳಿದ್ದಕ್ಕೆ ಬೌನ್ಸರ್ ಗಳು ಹಲ್ಲೆ ಮಾಡಿದ್ದರು ಎನ್ನಲಾಗಿದೆ.
ಮಕ್ಕಳ ವಿಚಾರಕ್ಕೆ ಜಗಳ.!
ದುನಿಯಾ ವಿಜಯ್ ಅವರು ಎರಡನೇ ಮದುವೆ ಆದ ಬಳಿಕ ಮೊದಲ ಪತ್ನಿ ನಾಗರತ್ನ ಅವರು ಎಲ್ಲೂ ಕಾಣಿಸಿಕೊಂಡಿಲ್ಲ. ಆದ್ರೆ, ಅವರ ಮೂರು ಮಕ್ಕಳು ಕೂಡ ಕೀರ್ತಿಗೌಡ ಮತ್ತು ದುನಿಯಾ ವಿಜಿ ಜೊತೆಯಲ್ಲೇ ಇದ್ದಾರೆ. ಹಾಗಾಗಿ, ಮಕ್ಕಳನ್ನ ನೋಡಲು ನಾಗರತ್ನ ಅವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಹೇಳಲಾಗಿದೆ.