ತಮಿಳುನಾಡಿನಲ್ಲಿ ಪೊಲೀಸರ ವಶಕ್ಕೆ ನಟ ದುನಿಯಾ ವಿಜಯ್

By Pavithra

Recommended Video

ಪೊಲೀಸ್ ಬಲೆಗೆ ಬಿದ್ದ ಕರಿ ಚಿರತೆ.. | Filmibeat Kannada

ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಯ್‌ ಅವರನ್ನು ತಮಿಳುನಾಡಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯ್ ಅವರನ್ನ ಸೆರೆ ಹಿಡಿದು ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಾಸ್ತಿಗುಡಿ ಚಿತ್ರೀಕರಣ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಪ್ರಕರಣದ ಸಂಬಂಧಪಟ್ಟಂತೆ ನಿರ್ಮಾಪಕ ಸುಂದರ್‌ ಪಿ.ಗೌಡ ಬಂಧನಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತೆರಳಿದ್ದರು. ಈ ವೇಳೆಯಲ್ಲಿ ಪೊಲೀಸರಿಂದ ಆರೋಪಿ ತಪ್ಪಿಸಿಕೊಳ್ಳಲು ವಿಜಯ್ ಸಹಕರಿಸಿದ್ದ ಹಿನ್ನಲೆಯಲ್ಲಿ ದುನಿಯಾ ವಿಜಯ್‌ ವಿರುದ್ಧ ದೂರು ದಾಖಲಾಗಿತ್ತು.

Duniya Vijay was arrested by chennammanakere Achukattu police at Tamil Nadu

ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್‌ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ಕಳೆದ ಎಂಟು ದಿನಗಳಿಂದ ತಪ್ಪಿಸಿಕೊಂಡಿದ್ದ ದುನಿಯಾ ವಿಜಯ್‌ ಹಾಗೂ ಸುಂದರ್ ಗೌಡ ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸದ್ಯ ತಮಿಳಿನಾಡಿನಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ವಶಕ್ಕೆ ದುನಿಯಾ ವಿಜಯ್ ಸಿಕ್ಕಿದ್ದಾರೆ ಎಂದು ತಿಳಿದು ಬಂದಿದೆ.

More from Filmibeat

English summary
Kannada actor Duniya Vijay has been arrested by Chennammana Kere Achchukattu police in Tamil Nadu.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X