Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳುನಾಡಿನಲ್ಲಿ ಪೊಲೀಸರ ವಶಕ್ಕೆ ನಟ ದುನಿಯಾ ವಿಜಯ್
Recommended Video
ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ತಮಿಳುನಾಡಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯ್ ಅವರನ್ನ ಸೆರೆ ಹಿಡಿದು ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಮಾಸ್ತಿಗುಡಿ ಚಿತ್ರೀಕರಣ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಪ್ರಕರಣದ ಸಂಬಂಧಪಟ್ಟಂತೆ ನಿರ್ಮಾಪಕ ಸುಂದರ್ ಪಿ.ಗೌಡ ಬಂಧನಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತೆರಳಿದ್ದರು. ಈ ವೇಳೆಯಲ್ಲಿ ಪೊಲೀಸರಿಂದ ಆರೋಪಿ ತಪ್ಪಿಸಿಕೊಳ್ಳಲು ವಿಜಯ್ ಸಹಕರಿಸಿದ್ದ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು.
ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಮೇಲೆ ಎಫ್.ಐ.ಆರ್ ದಾಖಲು.!
ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ಕಳೆದ ಎಂಟು ದಿನಗಳಿಂದ ತಪ್ಪಿಸಿಕೊಂಡಿದ್ದ ದುನಿಯಾ ವಿಜಯ್ ಹಾಗೂ ಸುಂದರ್ ಗೌಡ ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸದ್ಯ ತಮಿಳಿನಾಡಿನಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ವಶಕ್ಕೆ ದುನಿಯಾ ವಿಜಯ್ ಸಿಕ್ಕಿದ್ದಾರೆ ಎಂದು ತಿಳಿದು ಬಂದಿದೆ.