Don't Miss!
- Automobiles 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಇದೀಗ ವಿಚಾರಣಾಧೀನ ಖೈದಿ ನಂಬರ್ 9035.!
ಸ್ಯಾಂಡಲ್ ವುಡ್ ನಲ್ಲಿ 'ಜಂಗ್ಲಿ' ಎಂದೇ ಖ್ಯಾತಿ ಪಡೆದಿದ್ದ ದುನಿಯಾ ವಿಜಯ್ ಇದೀಗ ಜೈಲು ಪಾಲಾಗಿದ್ದಾರೆ. ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿದ ದುನಿಯಾ ವಿಜಯ್ ಮತ್ತು ಮೂವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ತಲುಪಿದ ದುನಿಯಾ ವಿಜಯ್ ಅಂಡ್ ಗ್ಯಾಂಗ್ ಗೆ ಇಂದು ವಿಚಾರಣಾಧೀನ ಖೈದಿ ಸಂಖ್ಯೆ ನೀಡಲಾಗಿದೆ. ಅದರ ಅನುಸಾರ ದುನಿಯಾ ವಿಜಯ್ ಇದೀಗ ವಿಚಾರಣಾಧೀನ ಖೈದಿ ನಂಬರ್ 9035, ಪ್ರಸಾದ್ ವಿಚಾರಣಾಧೀನ ಖೈದಿ ನಂಬರ್ 9036, ಮಣಿ ವಿಚಾರಣಾಧೀನ ಖೈದಿ ನಂಬರ್ 9037 ಹಾಗೂ ಪ್ರಸಾದ್ ವಿಚಾರಣಾಧೀನ ಖೈದಿ ನಂಬರ್ 9038.
ಇಂದು ವಿಚಾರಣಾಧೀನ ಖೈದಿಗಳ ಕೊಠಡಿಗೆ ವಿಜಯ್ ಅಂಡ್ ಗ್ಯಾಂಗ್ ಶಿಫ್ಟ್.!
ಇಂದು ಮಧ್ಯಾಹ್ನ ಮೂರು ಗಂಟೆಗೆ 8ನೇ ಎಸಿಎಂಎಂ ಕೋರ್ಟ್ ನಲ್ಲಿ ದುನಿಯಾ ವಿಜಯ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನಿಗೆ ಪಾನಿಪೂರಿ ಕಿಟ್ಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.
ತಮ್ಮ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಶ್ಯಾಮ ಸುಂದರ್ ರನ್ನ ನೇಮಕ ಮಾಡಲು ಡಿಸಿಎಂ ಪರಮೇಶ್ವರ್ ಬಳಿ ಪಾನಿಪೂರಿ ಕಿಟ್ಟಿ ಇಂದು ಬೆಳಗ್ಗೆ ಮನವಿ ಮಾಡಿದ್ದರು.
ದುನಿಯಾ ವಿಜಿಗೆ ಸಿಕ್ಕಿಲ್ಲ ಬೇಲ್, ಪರಪ್ಪನ ಅಗ್ರಹಾರಕ್ಕೆ ಹೊರಟ 'ಕರಿಚಿರತೆ'
ಅತ್ತ ಏಟು ತಿಂದ ಮಾರುತಿ ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ತುಟಿ ಸೀಳಾಗಿದ್ದು, ಹೊಲಿಗೆ ಹಾಕಲಾಗಿದೆ. ತಿಂದ ಆಹಾರವನ್ನು ಜೀರ್ಣಿಸಿಕೊಳ್ಳಲಾಗದೆ, ಮಾರುತಿ ಗೌಡ ವಾಂತಿ ಮಾಡಿಕೊಳ್ಳುತ್ತಿದ್ದಾನೆ ಎಂದು ಪಾನಿಪೂರಿ ಕಿಟ್ಟಿ ತಿಳಿಸಿದ್ದಾರೆ.