Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮರ ಯೋಧನ ಕುಟುಂಬಕ್ಕೆ ಸಹಾಯ ಮಾಡಿದ ದುನಿಯಾ ವಿಜಿ
ಸಿಯಾಚಿನ್ ನ ನಿರ್ಗಲ್ಲಿನಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ 'ಅಮರ' ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆರ್ಥಿಕ ಧನ ಸಹಾಯ ಮಾಡಲು ನಿರ್ಧರಿಸಿರುವ ವಿಚಾರವನ್ನು ನಾವು ನಿನಗೆ ಈ ಮೊದಲೇ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೆ.
ಇದೀಗ ಹುತಾತ್ಮ ಯೋಧ ಹನುಮಂತಪ್ಪ ಮತ್ತವರ ಕುಟುಂಬವನ್ನು ಬೆಂಗಳೂರಿಗೆ ಕರೆಸಿಕೊಂಡ ನಿರ್ಮಾಪಕ ಕಮ್ ಅಕಾಡೆಮಿ ಅಧ್ಯಕ್ಷ ಸಾರಾ ಗೋವಿಂದು ಅವರು ಮಾತು ಕೊಟ್ಟಂತೆ ಒಂದು ಲಕ್ಷ ರೂಪಾಯಿ ಪರಿಹಾರ ಧನವನ್ನು ಕುಟುಂಬದವರ ಕೈಗೆ ಹಸ್ತಾಂತರಿಸಿದ್ದಾರೆ.[ಯೋಧ ಹನುಮಂತಪ್ಪ ಕುಟುಂಬಕ್ಕೆ KFCC ಯಿಂದ ಪರಿಹಾರ ಧನ]
ನಿರ್ದೇಶಕರ ಸಂಘದ ವತಿಯಿಂದ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸುವ ಉದ್ದೇಶದಿಂದ ಇತ್ತೀಚೆಗೆ ಕರೆದಿದ್ದ ಪತ್ರೀಕಾಗೋಷ್ಠಿಯಲ್ಲಿ ಅಮರ ಯೋಧ ಹನುಮಂತಪ್ಪ ಅವರ ತಾಯಿ ಬಸವ್ವ ಮತ್ತವರ ಮಡದಿ ಮಹಾದೇವಿ ಮತ್ತು ಪುಟ್ಟ ಮಗಳು ನೇತ್ರಾ ಅವರನ್ನು ಕರೆಸಿ ಅವರಿಗೆ ಧನಸಹಾಯ ಮಾಡಿದರು.[ಅಭಿಮಾನಿಯ ಅಂತಿಮ ಇಚ್ಛೆ ಪೂರ್ಣಗೊಳಿಸಿದ ವಿಜಿ]
ಅಂದಹಾಗೆ ಸದಾ ಕಷ್ಟದಲ್ಲಿರುವವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಹಾಯ ಮಾಡುತ್ತಾ ಬರುತ್ತಿರುವ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ದುನಿಯಾ ವಿಜಯ್ ಅವರು ಹುತಾತ್ಮ ಹನುಮಂತಪ್ಪ ಅವರ ಕುಟುಂಬಕ್ಕೂ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದಾರೆ.[ದುನಿಯಾ ವಿಜಯ್ ಕಟ್ಟಾ ಅಭಿಮಾನಿ ಆಂಟೋನಿ ರಾಜ್ ನಿಧನ]
ಪತ್ರೀಕಾಗೋಷ್ಠಿಯಲ್ಲಿ ದುನಿಯಾ ವಿಜಯ್ ಅವರು ಕೂಡ ಭಾಗವಹಿಸಿದ್ದು, ಇದೇ ಸಂದರ್ಭದಲ್ಲಿ ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ 25 ಸಾವಿರ ರೂಪಾಯಿ ಚೆಕ್ ವಿತರಿಸಿದ್ದಾರೆ.[ಚಿತ್ರಗಳು: ವಿಜಿ 'ಮಾಸ್ತಿ ಗುಡಿ'ಗೆ ಅಮ್ಮಂದಿರಿಂದ ಮುಹೂರ್ತ]
ಇದು ನಟ ದುನಿಯಾ ವಿಜಯ್ ಅವರ ಸಹಾಯ ಮಾಡುವ ಮನಸ್ಥಿತಿಯನ್ನು ತೋರಿಸುತ್ತಿದ್ದು, ಒಟ್ನಲ್ಲಿ ತಮ್ಮ ಸರಳತೆಯಿಂದ ಸೂಪರ್ ಸ್ಟಾರ್ ವಿಜಿ ಅವರು ಸಾವಿರಾರು ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ.