Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದಲ್ಲಿ ಸಿಲುಕಿದ ಯೋಗರಾಜ್ ಭಟ್ಟರ 'ದನ ಕಾಯೋನು'
ಕನ್ನಡ ಚಿತ್ರರಂಗದಲ್ಲಿ ಟೈಟಲ್ ವಿವಾದ ಅನ್ನೋ ಸಮಸ್ಯೆ ನಿನ್ನೆ ಮೊನ್ನೆಯದಲ್ಲ ಸಾಮಾನ್ಯವಾಗಿ ಯಾವಾಗಲೂ ಈ ಸಮಸ್ಯೆ ತಲೆದೂರುತ್ತಲೇ ಇರುತ್ತದೆ. ಇದೀಗ ಟೈಟಲ್ ವಿವಾದದ ಬಿಸಿ ಭಟ್ಟರ 'ದನ ಕಾಯೋನು' ಚಿತ್ರಕ್ಕೆ ತಟ್ಟಿದೆ.
ಹೌದು ಖ್ಯಾತ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ ಅವರು ಟೈಟಲ್ ರಿಜಿಸ್ಟರ್ ಮಾಡದೇ ದುನಿಯಾ ವಿಜಿ ಮತ್ತು ಪ್ರಿಯಾಮಣಿ ಕಾಣಿಸಿಕೊಂಡಿರುವ 'ದನ ಕಾಯೋನು' ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ಮಾತ್ರವಲ್ಲದೇ ಇತ್ತೀಚೆಗೆ ಆಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ.[''ಥೂ....'ದನ ಕಾಯೋ' ದುನಿಯಾ ವಿಜಿನ ತಂದು'']
ಇದೀಗ ಹೊಸದಾಗಿ ಗಾಂಧಿನಗರದಲ್ಲಿ ಎದ್ದಿರುವ ವಿವಾದ ಏನಪ್ಪಾ ಅಂದ್ರೆ 'ದನ ಕಾಯೋನು' ಎಂಬ ಹೆಸರನ್ನು ಸಲೀಂವುಲ್ಲಾ ಖಾನ್ ಎನ್ನುವವರು ಸುಮಾರು ಮೂರು ವರ್ಷಗಳ ಹಿಂದೆಯೇ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ರಿಜಿಸ್ಟರ್ ಮಾಡಿದ್ದರಂತೆ. ಆನಂತರ ನಿರ್ದೇಶಕ ಯೋಗರಾಜ್ ಭಟ್ಟರು ಅದೇ ಹೆಸರಿನಲ್ಲಿ ಸಿನಿಮಾ ಮಾಡಿ ಮುಗಿಸಿದ್ದಾರೆ.[ತೆಲುಗಿನ 'ಅಖಿಲ್' ಸೋತಿದ್ದಕ್ಕೆ ಕನ್ನಡದ ಚಿತ್ರಗಳು ಬಲಿಪಶು ಆದ್ವಾ?]
ಅಂದಹಾಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಟೈಟಲ್ ರಿಜಿಸ್ಟರ್ ಮಾಡಿಸಿದ್ದಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಆದರೆ ಸಲೀಂವುಲ್ಲಾ ಖಾನ್ ಅವರು ಮಾತ್ರ ವಾಣಿಜ್ಯ ಮಂಡಳಿಗೆ ದೂರು ದಾಖಲಿಸಿದ್ದಾರೆ.[ಚಿತ್ರಗಳು: ಭರ್ಜರಿಯಾಗಿ ದನ ಕಾಯುತ್ತಿರುವ ವಿಜಿ ಮತ್ತು ಪ್ರಿಯಾಮಣಿ..!]
ಕಳೆದ ಎರಡು ವರ್ಷದ ಹಿಂದೆಯೇ ಟೈಟಲ್ ರಿಜಿಸ್ಟರ್ ಮಾಡಿಸಿರುವುದಾಗಿ ಹೇಳುವ ಸಲೀಂವುಲ್ಲಾ ಖಾನ್ ಅವರು ಎರಡು ಬಾರಿ ಟೈಟಲ್ ಕುರಿತಂತೆ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದು, ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರಿಗೆ ಮಂಡಳಿ ನೋಟಿಸ್ ಕೂಡ ನೀಡಿತ್ತು.[ಶೀರ್ಷಿಕೆ ವಿವಾದದಲ್ಲಿ ಭಟ್ರ 'ದನ ಕಾಯೋನು']
ಆದರೆ ಇದೀಗ ಚಿತ್ರದ ಟೈಟಲ್ ಬಿಟ್ಟುಕೊಡುವಂತೆ ನಿರ್ಮಾಪಕ ಶ್ರೀನಿವಾಸ್ ಮತ್ತು ಯೋಗರಾಜ್ ಭಟ್ಟರು ಬೆದರಿಕೆ ಹಾಕಿದ್ದಾರೆ ಎಂದು ಸಲೀಂವುಲ್ಲಾ ಖಾನ್ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.