Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ಬಿಡುಗಡೆಗೂ ಮುಂಚೆ ಅಣ್ಣಮ್ಮ ದೇವಿಯ ಮೊರೆ ಹೋದ 'ಸಲಗ'
ದುನಿಯಾ ವಿಜಯ್ ನಟಿಸಿ, ಚೊಚ್ಚಲ ಬಾರಿಗೆ ನಿರ್ದೇಶಿಸುತ್ತಿರುವ ಸಿನಿಮಾ ಸಲಗ ದಸರಾ ಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಮೊದಲ ಸಲ ದುನಿಯಾ ವಿಜಯ್ ಆಕ್ಷನ್ ಕಟ್ ಹೇಳಿರುವ ಕಾರಣ ಬಹಳ ದೊಡ್ಡ ಮಟ್ಟದಲ್ಲಿ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಅದಕ್ಕೆ ತಕ್ಕಂತೆ ಟೀಸರ್, ಹಾಡುಗಳು ಹಾಗೂ ಪ್ರಮೋಷನ್ ಸಹ ಮಾಡಲಾಗಿದೆ.
ಅಕ್ಟೋಬರ್ 14 ರಂದು ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಸಲಗ ರಿಲೀಸ್ ಆಗುತ್ತಿದೆ. ಅದಕ್ಕೂ ಮುಂಚೆ ಈಗ ವಿಜಿ ಅವರ ಕುಟುಂಬ ನಗರದ ಅಣ್ಣಮ್ಮ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ.
ಶುಕ್ರವಾರ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿದ ದುನಿಯಾ ವಿಜಯ್ ಹಾಗೂ ಪತ್ನಿ ಕೀರ್ತಿ ಸಲಗ ಚಿತ್ರದ ಸೆನ್ಸಾರ್ ಪ್ರಮಾಣಪತ್ರವಿಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪುತ್ರ ಸಾಮ್ರಾಟ್ ಹಾಗೂ ಚಿತ್ರದ ನಿರ್ಮಾಪಕ ಕೆಪಿ ಶ್ರೀಕಾಂತ್ ಸಹ ಭಾಗಿಯಾಗಿದ್ದರು.
ಅಕ್ಟೋಬರ್
10ಕ್ಕೆ
ಸಲಗ
ಪ್ರಿ-ರಿಲೀಸ್
ಕಾರ್ಯಕ್ರಮ
ಅಕ್ಟೋಬರ್
10ರಂದು
ಬೆಂಗಳೂರಿನಲ್ಲಿ
ಖಾಸಗಿ
ಹೋಟೆಲ್ನಲ್ಲಿ
ಸಲಗ
ಚಿತ್ರದ
ಪ್ರಿ-ರಿಲೀಸ್
ಕಾರ್ಯಕ್ರಮ
ಆಯೋಜನೆಯಾಗಿದೆ.
ಈ
ವಿಶೇಷ
ಕಾರ್ಯಕ್ರಮಕ್ಕೆ
ಸ್ಟಾರ್
ನಟರು
ಹಾಗೂ
ರಾಜಕೀಯ
ಗಣ್ಯರು
ಅತಿಥಿಗಳಾಗಿ
ಭಾಗವಹಿಸುತ್ತಿದ್ದಾರೆ.
ಮಾಜಿ
ಮುಖ್ಯಮಂತ್ರಿ
ಸಿದ್ದರಾಮಯ್ಯ,
ಕೆಪಿಸಿಸಿ
ಅಧ್ಯಕ್ಷ
ಡಿಕೆ
ಶಿವಕುಮಾರ್,
ಹ್ಯಾಟ್ರಿಕ್
ಹೀರೋ
ಶಿವರಾಜ್
ಕುಮಾರ್,
ರಿಯಲ್
ಸ್ಟಾರ್
ಉಪೇಂದ್ರ
ಹಾಗೂ
ಪವರ್
ಸ್ಟಾರ್
ಪುನೀತ್
ರಾಜ್
ಕುಮಾರ್
ಸಲಗ
ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳುತ್ತಿರುವ
ಬಗ್ಗೆ
ಮಾಹಿತಿ
ಲಭ್ಯವಾಗಿದೆ.
ಈ
ಹಿನ್ನೆಲೆ
ಸಿದ್ದರಾಮಯ್ಯ,
ಪುನೀತ್
ರಾಜ್
ಕುಮಾರ್,
ಶಿವಣ್ಣ,
ಉಪೇಂದ್ರ
ಅವರನ್ನು
ಭೇಟಿ
ಮಾಡಿ
ಆಹ್ವಾನಿಸಲಾಗಿದೆ.
ಸಲಗ ಚಿತ್ರ ಸೆನ್ಸಾರ್ ಮುಗಿಸಿದ್ದ ಯಾವುದೇ ಕಟ್ ಇಲ್ಲದೇ 'ಎ' ಪ್ರಮಾಣ ಪತ್ರ ನೀಡಲಾಗಿದೆ. ಪಕ್ಕಾ ರೌಡಿಸಂ ಆಧರಿತ ಕಥಾಹಂದರ ಹೊಂದಿದ್ದು, ಸುಕ್ಕ ಶೈಲಿಯಲ್ಲಿ ಸಿನಿಮಾ ತಯಾರಾಗಿದೆ. ಈಗಾಗಲೇ ಹಾಡುಗಳು, ಡೈಲಾಗ್ಗಳು ಹಾಗೂ ಟೀಸರ್ ಭರ್ಜರಿ ಸದ್ದು ಮಾಡಿದೆ.
ದುನಿಯಾ ವಿಜಯ್ ಜೊತೆ ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಂಜನಾ ಪ್ರಕಾಶ್ ನಾಯಕಿ. ಕಾಕ್ರೋಚ್ ಖ್ಯಾತಿಯ ಸುಧೀ, ಯಶ್ ಶೆಟ್ಟಿ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಕೆಪಿ ಶ್ರೀಕಾಂತ್ ನಿರ್ಮಿಸಿದ್ದಾರೆ. ಕೆಜಿ ರಸ್ತೆಯಲ್ಲಿರುವ ಸಂತೋಷ್ ಮೇನ್ ಥಿಯೇಟರ್ ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ಚಿತ್ರಮಂದಿರಗಳಲ್ಲಿ ಸಲಗ ಎಂಟ್ರಿಯಾಗಲಿದೆ.