Don't Miss!
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ 'ಟಗರು' ನೋಡಲಿದ್ದಾರೆ ದುನಿಯಾ ವಿಜಯ್ ಮತ್ತು 'ಸಲಗ' ತಂಡ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಕಾಂಬಿನೇಷನ್ನಲ್ಲಿ ಬಂದಿದ್ದ ಟಗರು ಸಿನಿಮಾ ಮತ್ತೆ ರಿ ರಿಲೀಸ್ ಆಗಿದೆ. ಇಂದಿನಿಂದ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಟಗರು ಪ್ರದರ್ಶನ ಕಾಣ್ತಿದೆ.
'ಟಗರು' ಸಿನಿಮಾ ಮತ್ತೆ ಬಿಡುಗಡೆಯಾಗಿರುವ ಹಿನ್ನೆಲೆ ನಟ ದುನಿಯಾ ವಿಜಯ್ ಸಾಥ್ ನೀಡುತ್ತಿದ್ದಾರೆ. ಟಗರು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ನಿರ್ಧರಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ದುನಿಯಾ ವಿಜಯ್ ಮಾಹಿತಿ ನೀಡಿದ್ದಾರೆ.
ನೇಕಾರರ ಪರವಾಗಿ ಹೊಸ ಚಾಲೆಂಜ್ ಆರಂಭಿಸಿದ ದುನಿಯಾ ವಿಜಯ್
''ಕಳೆದ ಆರೇಳು ತಿಂಗಳಿನಿಂದ ಕೊರೊನಾ, ಐಸೋಲೇಶನ್, ಕ್ವಾರಂಟೈನ್, ಸೀಲ್ ಡೌನ್ ಇದೇ ರೀತಿಯ ಪದಗಳನ್ನು ಕೇಳುತ್ತಿದ್ದ ನಮಗೆ ಈಗ ಮಾರ್ನಿಂಗ್ ಶೋ, ಮ್ಯಾಟ್ನಿ, ಲೇಟ್ ನೈಟ್ ಶೋ ಎಂಬ ಪದಗಳನ್ನು ಕೇಳುವ ಸಮಯ ಬಂದಿದೆ. ಕೊರೊನಾಗೆ ವ್ಯಾಕ್ಸಿನ್ ಇನ್ನೂ ಬಂದಿಲ್ಲ, ಆದರೆ ಜೀವನವೂ ನಡೆಯಬೇಕಿರುವುದರಿಂದ ಎಲ್ಲ ಉದ್ಯಮಗಳಂತೆ, ಕಳೆದೊಂದು ವಾರದಿಂದ ಸರ್ಕಾರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ಕನಸಿನ ಮನೆಗಳಾದ ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿವೆ.''
''ಭಯ ಆತಂಕ ಎಲ್ಲದರ ನಡುವೆಯೂ ಒಂದಷ್ಟು ಸಿನಿಮಾ ಪ್ರೇಮಿಗಳು ಥೀಯೇಟರ್ಗೆ ಬಂದು ಸಿನಿಮಾ ನೋಡಿದ್ದಾರೆ. ಅವರೆಲ್ಲರಿಗೂ ನನ್ನ ಮನಃಪೂರ್ವಕ ವಂದನೆಗಳು. ನನ್ನ 'ಸಲಗ' ಸಿನಿಮಾದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್ ನಿರ್ಮಾಣದ ಗೆಳೆಯ ಸೂರಿ ನಿರ್ದೇಶನದ ಚಿತ್ರರಂಗದ ನಾಯಕ, ನನ್ನ ಪಾಲಿಗೆ ಅಣ್ಣನ ಸಮಾನರಾದ ಶಿವರಾಜ್ ಕುಮಾರ್ ಗೆಳೆಯ ಡಾಲಿ ಧನಂಜಯ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ 'ಟಗರು' ಇಂದಿನಿಂದ ಮರು ಬಿಡುಗಡೆಯಾಗುತ್ತಿದೆ.''
'ಸಲಗ' ಬಳಿಕ ಮತ್ತೊಂದು ಸಿನಿಮಾಗೆ ವಿಜಯ್ ನಿರ್ದೇಶನ: ಹೊಸ ನಾಯಕನನ್ನು ಪರಿಚಯಿಸುತ್ತಿದ್ದಾರೆ ವಿಜಿ
Recommended Video
''ಚಿತ್ರ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯನ್ನು ದೋಚಲಿ ಎಂದು ಹಾರೈಸುತ್ತಾ ಭಾನುವಾರ ಅಂದರೆ ಅ. 25ರ ಮಧ್ಯಾಹ್ನ 1.15ರ ಪ್ರದರ್ಶನಕ್ಕೆ ಅಭಿಮಾನಿಗಳ ಜತೆ ಸಿನಿಮಾ ನೋಡಲು ಮೈಸೂರು ರಸ್ತೆಯಲ್ಲಿರುವ ಸಿರ್ಸಿ ಸರ್ಕಲ್ ಬಳಿಯ ಗೋಪಾಲನ್ ಸಿನಿಮಾಸ್ಗೆ ಬರುತ್ತಿದ್ದೇನೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಎಚ್ಚರಿಕೆಯಲ್ಲಿನಾವು ಇದ್ದುಕೊಂಡು ಸಿನಿಮಾ ನೋಡಲು ಆರಂಭಿಸೋಣ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಖುಷಿ ಮತ್ತು ಸಂತೋಷವನ್ನು ಅನುಭವಿಸೋಣ'' ಎಂದು ತಿಳಿಸಿದ್ದಾರೆ.