Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಮೀನು ಸಿಕ್ಕಿಲ್ಲ, ದುನಿಯಾ ವಿಜಯ್ ಮುಂದಿನ ನಿರ್ಧಾರವೇನು.?
Recommended Video
ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲಿನ ಹಲ್ಲೆ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ನಟ ದುನಿಯಾ ಜಾಮೀನು ಅರ್ಜಿಯನ್ನ ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ತಿರಸ್ಕರಿಸಿದೆ.
ದುನಿಯಾ ವಿಜಯ್, ಪ್ರಸಾದ್, ಮಣಿ ಮತ್ತು ಪ್ರಸಾದ್ ನಾಲ್ಕು ಜನ ಹಲ್ಲೆ ಪ್ರಕರಣದಲ್ಲಿ ಬಂಧನವಾಗಿದ್ದು, ಜಾಮೀನುಗಾಗಿ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ್ದ 8ನೇ ಎಸಿಎಂಎಂ ಕೋರ್ಟ್ ಇಂದು ಅರ್ಜಿ ವಜಾ ಮಾಡಿದೆ.
ಹೀಗಾಗಿ, ಮತ್ತಷ್ಟು ದಿನ ದುನಿಯಾ ವಿಜಯ್ ಜೈಲಿನಲ್ಲೇ ಇರಬೇಕಾಗಿದೆ. ಎಲ್ಲೋ ಒಂದು ಕಡೆ ವಿಜಿ ಮತ್ತು ಬೆಂಬಲಿಗರಿಗೆ ಬೇಲ್ ಸಿಗುತ್ತೆ ಎಂಬ ನಿರೀಕ್ಷೆ ಇತ್ತು. ಆದ್ರೆ, ಆ ನಿರೀಕ್ಷೆ ಫಲ ಕೊಡಲಿಲ್ಲ.
ಸದ್ಯ, ಸೆರೆಮನೆಯಲ್ಲಿರುವ ವಿಜಿ ಅವರ ಮುಂದಿನ ನಿರ್ಧಾರವೇನು ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯೆ ವಿಜಿ ಪರ ವಕೀಲ ಶಿವಕುಮಾರ್ ಅವರು ಮಾತನಾಡಿದ್ದು, ಸೆಷನ್ಸ್ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಹಲ್ಲೆಗೆ ಒಳಗಾಗಿರುವ ವ್ಯಕ್ತಿ ಮಾರುತಿ ಗೌಡ ಇನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದೇ ಇರುವುದು ವಿಜಯ್ ಅವರಿಗೆ ಜಾಮೀನು ನಿರಾಕರಿಸಲು ಕಾರಣವಿರಬಹುದು ಎಂದು ವಕೀಲ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಆದೇಶದ ಪ್ರತಿ ಇನ್ನು ವಕೀಲ ಕೈಸೇರಿಲ್ಲ. ಒಮ್ಮೆ ಆದೇಶ ಪ್ರತಿಯಲ್ಲಿ ಕೈಸೇರಿದ ನಂತರ ಯಾಕೆ ಜಾಮೀನು ವಜಾ ಮಾಡಲಾಗಿದೆ ಎಂದು ತಿಳಿಯಲಿದೆ.