Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಗಳೂರಲ್ಲಿ ಬಣ್ಣಬದಲಾಯಿಸಿದ ಸದಾನಂದಗೌಡ
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಶನಿವಾರ (ಡಿ.15) ಮಂಗಳೂರಿನಲ್ಲಿ ಮತ್ತೊಮ್ಮೆ ಕೋಲ್ಗೇಟ್ ನಗೆ ಬೀರಿದ್ದಾರೆ. ಅಯ್ಯೋ ಸದಾನಂದಗೌಡ ಏನಾದರು ಕೋಲ್ಗೇಟ್ ಜಾಹೀರಾತಿಗೆ ಅಪ್ಪಿತಪ್ಪಿ ಸಹಿ ಹಾಕಿಬಿಟ್ಟರಾ ಏನು ಎಂದು ಗಾಬರಿಯಾಗಬೇಡಿ.
ಅವರು ಕೋಲ್ಗೇಟ್ ಟೂತ್ ಪೇಸ್ಟ್ ಗೂ ಸಹಿಹಾಕಿಲ್ಲ ಗೋಪಾಲ್ ಹಲ್ಲುಪುಡಿಗೂ ಹಾಕಿಲ್ಲ. ಅವರು ಸಹಿ ಹಾಕಿರುವುದು 'ಚೆಲ್ಲಾಪಿಲ್ಲಿ' ಎಂಬ ಕನ್ನಡ ಚಿತ್ರಕ್ಕೆ. ಚಿತ್ರದಲ್ಲಿ ಸದಾನಂದಗೌಡ ಅಭಿನಯಿಸುತ್ತಾರೆ ಎಂಬ ಸುದ್ದಿ ಬಂದ ತಕ್ಷಣ ಅವರು ಅಲ್ಲಗಳೆದಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಕೆಜೆಪಿ ಹೊಸ ಪಕ್ಷ ಕಟ್ಟಿದ ಮೇಲೆ ಸದಾನಂದಗೌಡರ ಬೆಂಬಲಿಗರು ಚೆಲ್ಲಾಪಿಲ್ಲಿಯಾಗಿ ಚದುರಿಹೋಗಿದ್ದರು. ಆದರೆ ಚದುರಿದ ಚಿತ್ರಗಳಿಗೂ ಈ ಚೆಲ್ಲಾಪಿಲ್ಲಿ ಚಿತ್ರಕ್ಕೂ ಎಳ್ಳಷ್ಟೂ ಸಂಬಂಧವಿರಲ್ಲ.
ತಮ್ಮ ಎಂದಿನ ರಾಜಕೀಯ ಜಂಜಾಟಗಳ ನಡುವೆ ಸ್ವಲ್ಪ ರೀಲೀಪ್ ಆದಂತೆ ಕಂಡ ಸದಾನಂದ ಗೌಡರು, ಮಂಗಳೂರಿನ ಸಿಟಿ ಸೆಂಟ್ರಲ್ ಮಾಲ್ ನಲ್ಲಿ ಬಣ್ಣಹಚ್ಚಿಕೊಂಡು ಕ್ಯಾಮೆರಾ ಮುಂದೆ ಡೈಲಾಗ್ ಹೊಡೆದರು.
ವಿಜಯ ರಾಘವೇಂದ್ರ, ಐಶ್ವರ್ಯಾ ನಾಗ್, ಶೋಭಾರಾಜ್ ಮುಖ್ಯಭೂಮಿಕೆಯಲ್ಲಿರುವ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಗೌಡರು ಮಾಜಿ ಸಿಎಂ ಪಾತ್ರವನ್ನು ಪೋಷಿಸಿದ್ದಾರೆ. ನಿರ್ದೇಶಕ ಸಾಯಿಕೃಷ್ಣ ಕುಡ್ಲ ಅವರ ಆಣತಿಯಂತೆ ಅವರು ಅಭಿನಯಿಸಿದರು.
ಶಿನೆಸಿಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುದೀಶ್ ಭಂಡಾರಿ, ಸುಕೇಶ್ ಭಂಡಾರಿ ನಿರ್ಮಿಸುತ್ತಿರುವ ಚಿತ್ರವಿದು. ಈ ಚಿತ್ರ ಔಟ್ ಅಂಡ್ ಔಟ್ ಮನರಂಜನಾತ್ಮಕವಾಗಿರುತ್ತದೆ. "Laughter is the best Medicine" ಎಂಬ ಆಂಗ್ಲ ನಾಣ್ಣುಡಿಗೆ ಅನ್ವರ್ಥವಾಗಿ ಈ ಚಿತ್ರ ಇರುತ್ತದೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು. (ಒನ್ಇಂಡಿಯಾ ಕನ್ನಡ)