Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದ್ವಾರಕೀಶ್ ಆರೋಗ್ಯದ ಸ್ಥಿತಿ ಬಗ್ಗೆ ಸುಳ್ಳು ಸುದ್ದಿ- ಫಿಲ್ಮಿಬೀಟ್ ಗೆ ನಿರ್ದೇಶಕ ಚೈತನ್ಯ ಸ್ಪಷ್ಟನೆ
''ದ್ವಾರಕೀಶ್ ಸರ್ ಆರಾಮಾಗಿ ಇದ್ದಾರೆ. ಅವರ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು'' ಎಂದು ನಿರ್ದೇಶಕ ಕೆ ಎಮ್ ಚೈತನ್ಯ ಫಿಲ್ಮಿಬೀಟ್ ಕನ್ನಡಕ್ಕೆ ತಿಳಿಸಿದ್ದಾರೆ.
ಕಳೆದ ರಾತ್ರಿಯಿಂದ ವಾಟ್ಸ್ ಅಪ್ ನಲ್ಲಿ ದ್ವಾರಕೀಶ್ ಆರೋಗ್ಯದ ಬಗ್ಗೆ ಕೆಲವು ಮೆಸೇಜ್ ಗಳು ಹರಿದಾಡಿದವು. ದ್ವಾರಕೀಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕೆಲವು ಸುದ್ದಿಗಳು ಬಂದರೆ, ಕೆಲವು ಕಡೆ RIP ದ್ವಾರಕೀಶ್ ಎಂಬ ಮೆಸೇಜ್ ಗಳು ಬಂದವು.
'ಪ್ರೀತಿ ಎಂದರೇನು?' ಉತ್ತರ ಕೆಎಂ ಚೈತನ್ಯರಿಗೆ ಗೊತ್ತು!
ಈ ಘಟನೆಯ ಬಗ್ಗೆ ಮಾತನಾಡಿರುವ ನಿರ್ದೇಶಕ ಚೈತನ್ಯ ''ನನಗೆ ನಿನ್ನೆ ಮಧ್ಯರಾತ್ರಿ ಈ ವಿಷಯ ತಿಳಿಯಿತು. ಆಗ ತಕ್ಷಣ ಅವರ ಮಗನ ಜೊತೆಗೆ ಮಾತನಾಡಿದೆ. ದ್ವಾರಕೀಶ್ ಸರ್ ಗೆ ಏನು ಆಗಿಲ್ಲ ಎಂದು ಅವರು ಹೇಳಿದ್ದಾರೆ. ವಯಸ್ಸಾಗಿರುವ ಆಗಿರುವ ಕಾರಣ ಆಗಾಗ ಆಸ್ಪತ್ರೆಗೆ ಹೋಗಬೇಕಾಗುತ್ತದೆ ಅಷ್ಟೇ.'' ಎಂದು ತಿಳಿಸಿದ್ದಾರೆ. ಸದ್ಯ, ದ್ವಾರಕೀಶ್ ಆರೋಗ್ಯ ಸ್ಥಿತಿ ಸಹಜವಾಗಿ ಇದ್ದು, ಅವರು ಮನೆಯಲ್ಲಿಯೇ ಇದ್ದಾರಂತೆ.
ಅಂದಹಾಗೆ, ನಿರ್ದೇಶಕ ಚೈತನ್ಯ ದ್ವಾರಕೀಶ್ ಬ್ಯಾನರ್ ನಲ್ಲಿ 'ಆಟಗಾರ' ಹಾಗೂ 'ಅಮ್ಮ ಐ ಲವ್ ಯೂ' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ, ದ್ವಾರಕೀಶ್ ಕುಟುಂಬದ ಆಪ್ತರಲ್ಲಿ ಒಬ್ಬರಾಗಿದ್ದಾರೆ.