Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದ್ವಾರಕೀಶ್ ಮುಂದಿನ ಚಿತ್ರ 'ಬನ್ ಬಟರ್ ಜಾಮ್'
ಏಪ್ರಿಲ್ 30ರಂದು ಮುಂಬೈನಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ಹಿಂದೆ ಇದೇ ಪ್ರಶಸ್ತಿಗೆ ಪಾರ್ವತಮ್ಮ ರಾಜ್ ಕುಮಾರ್, ಆರ್.ಲಕ್ಷ್ಮಣ್, ಕೆಸಿಎನ್ ಗೌಡ, ಸಿವಿಎಲ್ ಶಾಸ್ತ್ರಿ ಅವರು ಭಾಜನರಾಗಿದ್ದಾರೆ.
ಪ್ರತಿವರ್ಷ ಆಯಾ ಭಾಷೆಯ ಚಲನಚಿತ್ರ ವಾಣಿಜ್ಯ ಮಂಡಳಿ ಅರ್ಹರನ್ನು ಈ ಪ್ರಶಸ್ತಿಗಾಗಿ ಶಿಫಾರಸು ಮಾಡುತ್ತದೆ. ಭಾರತೀಯ ಚಿತ್ರರಂಗಕ್ಕಾಗಿ ಸಲ್ಲಿಸಿದ ಸೇವೆಗಾಗಿ ದ್ವಾರಕೀಶ್ ಅವರು ಈ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದೇ ಸಂತಸದಲ್ಲಿರುವ ದ್ವಾರಕೀಶ್ ಅವರು ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಅವರ ನಿರ್ಮಾಣದ 'ಚಾರುಲತಾ' ಚಿತ್ರ ನಿರೀಕ್ಷೆಗಳೆಲ್ಲವನ್ನೂ ತಲೆಕೆಳಗೆ ಮಾಡಿತು. ಥಾಯ್ ಭಾಷೆಯ 'ಅಲೋನ್' ಚಿತ್ರವನ್ನು ಅವರು 'ಚಾರುಲತಾ' ಮಾಡಿದ್ದರು.
ಈ ಬಾರಿ ಅವರು ರೊಮ್ಯಾಂಟಿಕ್ ಕಾಮಿಡಿ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರಕ್ಕೆ 'ಬ್ರೆಡ್ ಬಟರ್ ಜಾಮ್' ಎಂದು ಹೆಸರಿಟ್ಟಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದ್ದು ಮೇ ಅಥವಾ ಜೂನ್ ತಿಂಗಳಲ್ಲಿ ಚಿತ್ರ ಸೆಟ್ಟೇರುವ ಸಾಧ್ಯತೆಗಳಿವೆ.
ಚಿತ್ರಕಥೆ ಎಲ್ಲವೂ ಸಿದ್ಧವಾದ ಬಳಿಕ ಚಿತ್ರದ ಪಾತ್ರವರ್ಗ ಹಾಗೂ ತಾಂತ್ರಿಕ ಬಳಗ ಆಯ್ಕೆ ಮಾಡಲಾಗುತ್ತದೆ ಎನ್ನುತ್ತಾರೆ ದ್ವಾರಕೀಶ್ ಅವರ ಪುತ್ರ ಯೋಗೇಶ್. ಈ ಬಾರಿ ಅವರು ಬಾಕ್ಸ್ ಆಫೀಸ್ ಮೇಲೆ ಕಣ್ಣಿಟ್ಟುಕೊಂಡೇ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. (ಏಜೆನ್ಸೀಸ್)