Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗಳು ಸೋತು ನಾಲ್ಕೈದು ಮನೆ ಮಾರಿದ್ದಾರೆ ದ್ವಾರಕೀಶ್
''ಸಿನಿಮಾ ಬಿಟ್ಟು ನಾನು ಬೇರೆನೂ ಮಾಡಿಲ್ಲ. ಸಿನಿಮಾ ಸಿನಿಮಾ ಎಂದು ಸಿನಿಮಾದಲ್ಲಿಯೇ ಸತ್ತಿದ್ದೇನೆ.'' ಎಂದು ಭಾವುಕವಾಗಿ ಮಾತನಾಡಿದರು ದ್ವಾರಕೀಶ್.
ನಿರ್ಮಾಪಕ ಜಯಣ್ಣಗೆ ದ್ವಾರಕೀಶ್ 5 ಕೋಟಿ ಹಣ ನೀಡಬೇಕಿದ್ದು, ಈ ಘಟನೆ ಈಗ ದೊಡ್ಡ ಸುದ್ದಿಯಾಗಿದೆ. ಈ ಬಗ್ಗೆ ಮಾತನಾಡಿರುವ ದ್ವಾರಕೀಶ್ ''ಅವರು ಕೋರ್ಟ್ ಗೆ ಹೋಗಬೇಕಿತ್ತು. ಅದನ್ನು ಬಿಟ್ಟು ಹೀಗೆಲ್ಲ ಮಾಡುವುದು ತಪ್ಪು. ಕೋರ್ಟ್ ಆದೇಶ ನೀಡಿದರೆ ಮನೆ ಮಾರಿಯಾದರೂ ಹಣ ನೀಡುತ್ತಿದ್ದೆ.'' ಎಂದಿದ್ದಾರೆ.
'1 ಕೋಟಿ ಹಣಕ್ಕೆ ಬಾಯಿ ತೆಗೆದರೆ ನನ್ನ ವಿಷಯವು ಹೀಗೆ ಬರುವುದು'- ಜಗ್ಗೇಶ್ ಮಾತಿನ ಅರ್ಥ ಏನು?
ಈ ಹಿಂದೆ ಸಿನಿಮಾಗಳು ಸೋತಾಗ ದ್ವಾರಕೀಶ್ ಮನೆ ಮಾರಿಯೇ ಸಾಲ ತೀರಿಸಿದ್ದಾರಂತೆ. ತಮ್ಮ ಜೀವನದಲ್ಲಿ 80 ಕೋಟಿ ರೂಪಾಯಿ ಮನೆಗಳನ್ನು ಮಾರಿದ್ದೇನೆ ಎಂದು ಅವರೇ ಹೇಳಿದ್ದಾರೆ.
'ಉಡಿಸ್ ಮಾಡುತ್ತೇನೆ ಎಂದು ಜಯಣ್ಣ ಬೆದರಿಕೆ': ದ್ವಾರಕೀಶ್ ಕಣ್ಣೀರು
ದ್ವಾರಕೀಶ್ ಗೆ ಈ ಹಿಂದೆ ಅನೇಕ ಬಾರಿ ಮನೆ ಮಾರುವ ಪರಿಸ್ಥಿತಿ ಬಂದಿದೆ. ಹೀಗಾಗಿ ನಾಲ್ಕೈದು ಬಾರಿ ಅವರ ಮನೆ ಬದಲಾಗಿದೆ. ಬನಶಂಕರಿಯ ಮನೆ, ಎನ್ ಆರ್ ಕಾಲೋನಿಯ ಮನೆ, ಕೋರಮಂಗಲದ ಮನೆ ಹೀಗೆ ನಾಲ್ಕೈದು ಮನೆಯನ್ನು ದ್ವಾರಕೀಶ್ ಮಾರಿದ್ದಾರೆ. ಸದ್ಯ ಎಚ್ ಎಸ್ ಆರ್ ಲೇ ಔಟ್ ನಲ್ಲಿ ವಾಸವಾಗಿದ್ದಾರೆ.
Exclusive: ದ್ವಾರಕೀಶ್-ಜಯಣ್ಣ ಗಲಾಟೆ ಹಿಂದಿನ '5 ಕೋಟಿ' ವ್ಯವಹಾರದ ಅಸಲಿ ಸತ್ಯ
'ಆಯುಷ್ಮಾನ್ ಭವ' ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. ಸಿನಿಮಾ ಯಶಸ್ಸು ಕಾಣದ ಕಾರಣ ಅವರ ಜಯಣ್ಣಗೆ ನೀಡಬೇಕಾದ ಹಣ ನೀಡಲು ಆಗಲಿಲ್ಲ. ಇದರಿಂದ ಜಯಣ್ಣ ಹಾಗೂ ಯೋಗೇಶ್ ದ್ವಾರಕೀಶ್ ನಡುವೆ ಗಲಾಟೆ ನಡೆದಿದೆ. ಈಗ ಮತ್ತೆ ದ್ವಾರಕೀಶ್ ಮನೆ ಮಾರುವ ಮಾತನ್ನು ಆಡಿದ್ದಾರೆ.