Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗಳು ಸೋತು ನಾಲ್ಕೈದು ಮನೆ ಮಾರಿದ್ದಾರೆ ದ್ವಾರಕೀಶ್
''ಸಿನಿಮಾ ಬಿಟ್ಟು ನಾನು ಬೇರೆನೂ ಮಾಡಿಲ್ಲ. ಸಿನಿಮಾ ಸಿನಿಮಾ ಎಂದು ಸಿನಿಮಾದಲ್ಲಿಯೇ ಸತ್ತಿದ್ದೇನೆ.'' ಎಂದು ಭಾವುಕವಾಗಿ ಮಾತನಾಡಿದರು ದ್ವಾರಕೀಶ್.
ನಿರ್ಮಾಪಕ ಜಯಣ್ಣಗೆ ದ್ವಾರಕೀಶ್ 5 ಕೋಟಿ ಹಣ ನೀಡಬೇಕಿದ್ದು, ಈ ಘಟನೆ ಈಗ ದೊಡ್ಡ ಸುದ್ದಿಯಾಗಿದೆ. ಈ ಬಗ್ಗೆ ಮಾತನಾಡಿರುವ ದ್ವಾರಕೀಶ್ ''ಅವರು ಕೋರ್ಟ್ ಗೆ ಹೋಗಬೇಕಿತ್ತು. ಅದನ್ನು ಬಿಟ್ಟು ಹೀಗೆಲ್ಲ ಮಾಡುವುದು ತಪ್ಪು. ಕೋರ್ಟ್ ಆದೇಶ ನೀಡಿದರೆ ಮನೆ ಮಾರಿಯಾದರೂ ಹಣ ನೀಡುತ್ತಿದ್ದೆ.'' ಎಂದಿದ್ದಾರೆ.
'1 ಕೋಟಿ ಹಣಕ್ಕೆ ಬಾಯಿ ತೆಗೆದರೆ ನನ್ನ ವಿಷಯವು ಹೀಗೆ ಬರುವುದು'- ಜಗ್ಗೇಶ್ ಮಾತಿನ ಅರ್ಥ ಏನು?
ಈ ಹಿಂದೆ ಸಿನಿಮಾಗಳು ಸೋತಾಗ ದ್ವಾರಕೀಶ್ ಮನೆ ಮಾರಿಯೇ ಸಾಲ ತೀರಿಸಿದ್ದಾರಂತೆ. ತಮ್ಮ ಜೀವನದಲ್ಲಿ 80 ಕೋಟಿ ರೂಪಾಯಿ ಮನೆಗಳನ್ನು ಮಾರಿದ್ದೇನೆ ಎಂದು ಅವರೇ ಹೇಳಿದ್ದಾರೆ.
'ಉಡಿಸ್ ಮಾಡುತ್ತೇನೆ ಎಂದು ಜಯಣ್ಣ ಬೆದರಿಕೆ': ದ್ವಾರಕೀಶ್ ಕಣ್ಣೀರು
ದ್ವಾರಕೀಶ್ ಗೆ ಈ ಹಿಂದೆ ಅನೇಕ ಬಾರಿ ಮನೆ ಮಾರುವ ಪರಿಸ್ಥಿತಿ ಬಂದಿದೆ. ಹೀಗಾಗಿ ನಾಲ್ಕೈದು ಬಾರಿ ಅವರ ಮನೆ ಬದಲಾಗಿದೆ. ಬನಶಂಕರಿಯ ಮನೆ, ಎನ್ ಆರ್ ಕಾಲೋನಿಯ ಮನೆ, ಕೋರಮಂಗಲದ ಮನೆ ಹೀಗೆ ನಾಲ್ಕೈದು ಮನೆಯನ್ನು ದ್ವಾರಕೀಶ್ ಮಾರಿದ್ದಾರೆ. ಸದ್ಯ ಎಚ್ ಎಸ್ ಆರ್ ಲೇ ಔಟ್ ನಲ್ಲಿ ವಾಸವಾಗಿದ್ದಾರೆ.
Exclusive: ದ್ವಾರಕೀಶ್-ಜಯಣ್ಣ ಗಲಾಟೆ ಹಿಂದಿನ '5 ಕೋಟಿ' ವ್ಯವಹಾರದ ಅಸಲಿ ಸತ್ಯ
'ಆಯುಷ್ಮಾನ್ ಭವ' ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. ಸಿನಿಮಾ ಯಶಸ್ಸು ಕಾಣದ ಕಾರಣ ಅವರ ಜಯಣ್ಣಗೆ ನೀಡಬೇಕಾದ ಹಣ ನೀಡಲು ಆಗಲಿಲ್ಲ. ಇದರಿಂದ ಜಯಣ್ಣ ಹಾಗೂ ಯೋಗೇಶ್ ದ್ವಾರಕೀಶ್ ನಡುವೆ ಗಲಾಟೆ ನಡೆದಿದೆ. ಈಗ ಮತ್ತೆ ದ್ವಾರಕೀಶ್ ಮನೆ ಮಾರುವ ಮಾತನ್ನು ಆಡಿದ್ದಾರೆ.