Just In
- 5 min ago
RRR ಸಿನಿಮಾಕ್ಕೆ ವಿದೇಶದಲ್ಲಿ ಭಾರಿ ಭೇಡಿಕೆ: ಭಾರಿ ಮೊತ್ತಕ್ಕೆ ಸೇಲ್ ಆದ ವಿದೇಶ ಪ್ರದರ್ಶನ ಹಕ್ಕು
- 32 min ago
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
- 2 hrs ago
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
- 2 hrs ago
ಆ ಜಾಹೀರಾತುಗಳಲ್ಲಿ ನಟಿಸಿದ್ದಕ್ಕೆ ಈಗಲೂ ಪಶ್ಚಾತ್ತಾಪ ಪಡುತ್ತಿರುವ ಪ್ರಿಯಾಂಕಾ ಚೋಪ್ರಾ
Don't Miss!
- News
ಕೋಳಿ, ಕಾಗೆ, ನವಿಲುಗಳಲ್ಲೂ ಹಕ್ಕಿಜ್ವರ; ಭಾರತದ 12 ರಾಜ್ಯಗಳಿಗೆ ಆಘಾತ!
- Automobiles
ಕೈಗೆಟುಕುವ ದರದ ಕ್ವಿಡ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ರೆನಾಲ್ಟ್
- Education
IBPS PO/MT Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದ್ವಾರಕೀಶ್ ನಿರ್ಮಾಪಕರಾಗಲು ಅಣ್ಣಾವ್ರ ಜೊತೆ ಇನ್ನೊಬ್ಬ ವ್ಯಕ್ತಿ ಮುಖ್ಯ ಕಾರಣ
'ಕನ್ನಡದ ಕುಳ್ಳ' ಎಂದೇ ಗುರುತಿಸಿಕೊಂಡಿರುವ ದ್ವಾರಕೀಶ್, ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ದೊಡ್ಡ ಹೆಸರು ಮಾಡಿರುವ ಸಿನಿಮಾ ವ್ಯಕ್ತಿ. ಕನ್ನಡ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ದಿಗ್ಗಜ ಕಲಾವಿದ.
50ಕ್ಕೂ ಹೆಚ್ಚು ಚಿತ್ರಗಳನ್ನ ನಿರ್ಮಿಸಿರುವ ದ್ವಾರಕೀಶ್, ಇಂಡಸ್ಟ್ರಿಯಲ್ಲಿ ಏಳು ಬೀಳು ಕಂಡಿರುವ ನಿರ್ಮಾಪಕ. ಸತತವಾಗಿ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿದ್ದಾರೆ. ಸತತವಾಗಿ ಸೋಲಿನ ರುಚಿಯನ್ನು ಕಂಡಿದ್ದಾರೆ.
ರವಿಚಂದ್ರನ್ ತಂದೆ ನೆನೆದು ಕಣ್ಣೀರು ಹಾಕಿದ ದ್ವಾರಕೀಶ್
ಆದರೂ ಛಲ ಬಿಡದ ದ್ವಾರಕೀಶ್ ಎದ್ದು ನಿಂತು ಮತ್ತೆ ತಮ್ಮ 'ದ್ವಾರಕೀಶ್ ಚಿತ್ರ' ಸಂಸ್ಥೆಯನ್ನ ಯಶಸ್ಸಿನ ಹಾದಿಗೆ ಕರೆದುಕೊಂಡು ಬಂದು, ಮುಂದುವರಿಸುತ್ತಿದ್ದಾರೆ.
ಅಂದ್ಹಾಗೆ, ದ್ವಾರಕೀಶ್ ನಿರ್ಮಾಪಕರಾಗಲು ಡಾ ರಾಜ್ ಕುಮಾರ್ ಕಾರಣ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ರಾಜ್ ಜೊತೆಗೆ ಅವರ ತಮ್ಮ ವರದಪ್ಪ ಕೂಡ ಅಷ್ಟೇ ಮುಖ್ಯ ಕಾರಣ ಎಂದು ನೆನಪಿಸಿಕೊಂಡ ದ್ವಾರಕೀಶ್, ಜೀವನದಲ್ಲಿ ಅವರನ್ನ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
1966ರಲ್ಲಿ 'ಮಮತೆಯ ಬಂಧನ' ಎಂಬ ಚಿತ್ರವನ್ನ ಜಂಟಿಯಾಗಿ ನಿರ್ಮಿಸಿದ್ದ ದ್ವಾರಕೀಶ್, 1969ರಲ್ಲಿ 'ಮೇಯರ್ ಮುತ್ತಣ್ಣ' ಎಂಬ ಚಿತ್ರವನ್ನ ಸ್ವತಂತ್ರವಾಗಿ ನಿರ್ಮಿಸಿದರು. ಇಲ್ಲಿಂದ ಸುಮಾರು ಎರಡು ದಶಕಗಳ ಕಾಲ ಸೂಪರ್ ಹಿಟ್ ಚಿತ್ರಗಳನ್ನ ನೀಡಿದ ಹೆಗ್ಗಳಿಕೆ ದ್ವಾರಕೀಶ್ ಅವರದ್ದು.
ಈ ಮಧ್ಯೆ ಸತತ ಸೋಲುಗಳನ್ನ ಕಂಡ ದ್ವಾರಕೀಶ್ ಅವರು ದೊಡ್ಡ ಮಟ್ಟದ ನಷ್ಟ ಅನುಭವಿಸಿದರು. ನಂತರ 2005ರಲ್ಲಿ 'ಆಪ್ತಮಿತ್ರ' ಸಿನಿಮಾ ಮಾಡುವ ಮೂಲಕ ಮರುಜೀವ ಪಡೆದುಕೊಂಡರು.
ದ್ವಾರಕೀಶ್ ಚಿತ್ರ ಸಂಸ್ಥೆ ಅಡಿಯಲ್ಲಿ 50ಕ್ಕೂ ಅಧಿಕ ಚಿತ್ರಗಳು ನಿರ್ಮಾಣವಾಗಿದ್ದು, ಸದ್ಯ ಶಿವರಾಜ್ ಕುಮಾರ್ ಜೊತೆ 'ಆಯುಷ್ಮಾನ್ ಭವ' ಎಂಬ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ಮುಂದಿನ ತಿಂಗಳು ಆರಂಭದಲ್ಲಿ ಬಿಡುಗಡೆಯಾಗುತ್ತಿದೆ.