Just In
- 9 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 10 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 10 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಯಾಂಡಲ್ ವುಡ್ ನ ಹೊಸ 'ಗುರು ಶಿಷ್ಯರು' ಇವರೇ ನೋಡಿ
'ಗುರು ಶಿಷ್ಯರು' ಎಂದಾಕ್ಷಣ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ನಟನೆಯ ಸಿನಿಮಾ ನೆನಪಾಗುತ್ತೆ. ಖ್ಯಾತ ನಿರ್ದೇಶಕ ಹೆಚ್ ಆರ್ ಭಾರ್ಗವ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದ ಈ ಸಿನಿಮಾ 1981ರಲ್ಲಿ ತೆರೆಗೆ ಬಂದಿದೆ.
ಚಿತ್ರದಲ್ಲಿ ಮಂಜುಳ, ಜಯಮಾಲಿನಿ ಹೇಮ ಚೌಧರಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು. ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿದ್ದ ಈ ಸಿನಿಮಾದ ಬಗ್ಗೆ ಈಗ್ಯಾಕೆ ಮಾತು ಅಂತೀರಾ? ಗುರು ಶಿಷ್ಯರು ಸಿನಿಮಾ ಮತ್ತೆ ಬರ್ತಿದೆ. ಆದರೆ ಈ ಬಾರಿ ದ್ವಾರಕೀಶ್ ಇರಲ್ಲ. ಬದಲಾಗಿ ಕಾಮಿಡಿ ಕಿಂಗ್ ಶರಣ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಶರಣ್ 'ಅವತಾರ್ ಪುರುಷ' ಚಿತ್ರದ ಬಗ್ಗೆ ಇಂತಹದೊಂದು ಸುದ್ದಿ ನಿಜನಾ?
ಇಂದು (ಡಿಸೆಂಬರ್ 21) ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಅನ್ನು ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅನಾವರಣ ಮಾಡಿದ್ದಾರೆ. ಈ ಬಗ್ಗೆ ಶರಣ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು, ದ್ವಾರಕೀಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಮ್ಮ ಮುಂದಿನ ಪ್ರಯತ್ನ ಗುರು ಶಿಷ್ಯರು. ಹರಸಿ, ಹಾರೈಸಿ ಎಂದು ಹೇಳಿದ್ದಾರೆ.
40 ವರ್ಷಗಳ ಬಳಿಕ ಇದೇ ಹೆಸರಿನಲ್ಲಿ ಸಿನಿಮಾ ಮೂಡಿಬರುತ್ತಿವುದು ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ. ಅಂದಹಾಗೆ ಈ ಬಾರಿಯ ಗುರು ಶಿಷ್ಯರು ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ತರುಣ್ ಸುಧೀರ್. ಈ ಬಗ್ಗೆ ನಟ ಶರಣ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಫಸ್ಟ್ ಲುಕ್ ನಲ್ಲಿ ಒಂದೆಡೆ ಶರಣ್ ಮತ್ತೊಂದೆಡೆ ಮಕ್ಕಳು ಹಗ್ಗಜಗ್ಗಾಡುತ್ತಿರುವ ಚಿತ್ರವಿದೆ. ವಿಶೇಷ ಎಂದರೆ 1995ರ ಕಾಲಘಟ್ಟದ ಕಥೆ ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸದ್ಯ ಫಸ್ಟ್ ಲುಕ್ ಅನೌನ್ಸ್ ಮಾಡಿರುವ ಸಿನಿಮಾತಂಡ ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ.
ಅಂದಹಾಗೆ ನಿರ್ದೇಶಕ ತರುಣ್ ಸುಧೀರ್ ಸದ್ಯ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ರಾಬರ್ಟ್ ಸಿನಿಮಾ ಮುಂದಿನ ವರ್ಷ ಜನವರಿಗೆ ರಿಲೀಸ್ ಆಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಅಲ್ಲದೆ ದರ್ಶನ್ ಜೊತೆ ಮತ್ತೊಂದು ಸಿನಿಮಾ ಮಾಡಲು ತರುಣ್ ಸುಧೀರ್ ಈಗಾಗಲೇ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ತರುಣ್ ಶರಣ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಬಾರಿಯ ಗುರು ಶಿಷ್ಯರು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದ್ದಾರೆ.