Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನ ಹೊಸ 'ಗುರು ಶಿಷ್ಯರು' ಇವರೇ ನೋಡಿ
'ಗುರು ಶಿಷ್ಯರು' ಎಂದಾಕ್ಷಣ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ನಟನೆಯ ಸಿನಿಮಾ ನೆನಪಾಗುತ್ತೆ. ಖ್ಯಾತ ನಿರ್ದೇಶಕ ಹೆಚ್ ಆರ್ ಭಾರ್ಗವ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದ ಈ ಸಿನಿಮಾ 1981ರಲ್ಲಿ ತೆರೆಗೆ ಬಂದಿದೆ.
ಚಿತ್ರದಲ್ಲಿ ಮಂಜುಳ, ಜಯಮಾಲಿನಿ ಹೇಮ ಚೌಧರಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು. ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿದ್ದ ಈ ಸಿನಿಮಾದ ಬಗ್ಗೆ ಈಗ್ಯಾಕೆ ಮಾತು ಅಂತೀರಾ? ಗುರು ಶಿಷ್ಯರು ಸಿನಿಮಾ ಮತ್ತೆ ಬರ್ತಿದೆ. ಆದರೆ ಈ ಬಾರಿ ದ್ವಾರಕೀಶ್ ಇರಲ್ಲ. ಬದಲಾಗಿ ಕಾಮಿಡಿ ಕಿಂಗ್ ಶರಣ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಶರಣ್ 'ಅವತಾರ್ ಪುರುಷ' ಚಿತ್ರದ ಬಗ್ಗೆ ಇಂತಹದೊಂದು ಸುದ್ದಿ ನಿಜನಾ?
ಇಂದು (ಡಿಸೆಂಬರ್ 21) ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಅನ್ನು ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅನಾವರಣ ಮಾಡಿದ್ದಾರೆ. ಈ ಬಗ್ಗೆ ಶರಣ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು, ದ್ವಾರಕೀಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಮ್ಮ ಮುಂದಿನ ಪ್ರಯತ್ನ ಗುರು ಶಿಷ್ಯರು. ಹರಸಿ, ಹಾರೈಸಿ ಎಂದು ಹೇಳಿದ್ದಾರೆ.
40 ವರ್ಷಗಳ ಬಳಿಕ ಇದೇ ಹೆಸರಿನಲ್ಲಿ ಸಿನಿಮಾ ಮೂಡಿಬರುತ್ತಿವುದು ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ. ಅಂದಹಾಗೆ ಈ ಬಾರಿಯ ಗುರು ಶಿಷ್ಯರು ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ತರುಣ್ ಸುಧೀರ್. ಈ ಬಗ್ಗೆ ನಟ ಶರಣ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಫಸ್ಟ್ ಲುಕ್ ನಲ್ಲಿ ಒಂದೆಡೆ ಶರಣ್ ಮತ್ತೊಂದೆಡೆ ಮಕ್ಕಳು ಹಗ್ಗಜಗ್ಗಾಡುತ್ತಿರುವ ಚಿತ್ರವಿದೆ. ವಿಶೇಷ ಎಂದರೆ 1995ರ ಕಾಲಘಟ್ಟದ ಕಥೆ ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸದ್ಯ ಫಸ್ಟ್ ಲುಕ್ ಅನೌನ್ಸ್ ಮಾಡಿರುವ ಸಿನಿಮಾತಂಡ ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ.
Recommended Video
ಅಂದಹಾಗೆ ನಿರ್ದೇಶಕ ತರುಣ್ ಸುಧೀರ್ ಸದ್ಯ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ರಾಬರ್ಟ್ ಸಿನಿಮಾ ಮುಂದಿನ ವರ್ಷ ಜನವರಿಗೆ ರಿಲೀಸ್ ಆಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಅಲ್ಲದೆ ದರ್ಶನ್ ಜೊತೆ ಮತ್ತೊಂದು ಸಿನಿಮಾ ಮಾಡಲು ತರುಣ್ ಸುಧೀರ್ ಈಗಾಗಲೇ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ತರುಣ್ ಶರಣ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಬಾರಿಯ ಗುರು ಶಿಷ್ಯರು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದ್ದಾರೆ.