Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದ ನಡುವೆಯೂ ಮುಸ್ಲಿಂ ಬಾಂಧವರಿಗೆ ಬಕ್ರಿದ್ ಶುಭಾಶಯ ತಿಳಿಸಿದ ದರ್ಶನ್
ಇದು ದೇಶದಾದ್ಯಂತ ಮುಸ್ಲಿಂವರು ಈದ್ ಉಲ್ ಅಧಾವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇಸ್ಲಾಮಿಕ್ ಭಕ್ತರು ವಾರ್ಷಿಕ ಹಜ್ ಯಾತ್ರೆಯನ್ನು ಮುಕ್ತಾಯಗೊಳಿಸುವ ದಿನವಿದು. ಬಕ್ರಿದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಮುಸ್ಲಿಂಮರ ಈ ವಿಶೇಷ ದಿನದಂದು ದೇಶದ ಗಣ್ಯರು ಶುಭಾಶಯ ತಿಳಿಸುತ್ತಿದ್ದಾರೆ.
ಇದೀಗ ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಮುಸ್ಲಿಂ ಬಾಂಧವರಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. ತನ್ನ ವಿವಾದಗಳ ನಡುವೆಯೂ ದರ್ಶನ್ ಹಬ್ಬಕ್ಕೆ ವಿಶ್ ಮಾಡುವುದನ್ನು ಮರೆತಿಲ್ಲ. ಮುಸ್ಲಿಂ ಬಾಂಧವರಿಗೆ ಸಂತೋಷ, ನೆಮ್ಮದಿ ಕರುಣಿಸಲಿ ಎಂದು ಶುಭ ಕೋರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ದರ್ಶನ್, "ಈದ್ ಮುಬಾರಕ್ ಹಬ್ಬದ ಶುಭಾಶಯಗಳು.. ನಿಮ್ಮ ಬದುಕಿನಲ್ಲಿ ಸಂತೋಷ, ನೆಮ್ಮದಿ, ಐಶ್ವರ್ಯ ಕರುಣಿಸಲಿ" ಎಂದು ಹೇಳಿದ್ದಾರೆ.
ಅಂದಹಾಗೆ ದರ್ಶನ್ ವಿವಾದ ಕಳೆದ ಕೆಲವು ದಿನಗಳಿಂದ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ದರ್ಶನ್ ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ ಬಳಿಕ ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇಬ್ಬರ ನಡುವಿನ ವಾಕ್ಸಮರ ತಾರಕಕ್ಕೇರಿತ್ತು. ಸದ್ಯ ಈ ಘಟನೆ ಪೊಲೀಸ್ ತನಿಖೆಯಲ್ಲಿದೆ.
Recommended Video
ಇನ್ನು ಬಕ್ರಿದ್ ಹಬ್ಬಕ್ಕೆ ಸ್ಯಾಂಡಲ್ ವುಡ್ ನ ನಿರ್ದೇಶಕ ಸಿಂಪಲ್ ಸುನಿ ಕೂಡ ಶುಭಾಶಯ ತಿಳಿಸಿದ್ದಾರೆ. ತಮ್ಮದೆ ಶೈಲಿಯಲ್ಲಿ ವಿಶ್ ಮಾಡಿರುವ ಸುನಿ, ಬಿರಿಯಾನಿ ಬರಲಿ ಎಂದು ಹೇಳಿದ್ದಾರೆ. "ಮುಸ್ಲಿಂ ಸ್ನೇಹಿತರಿಗೆಲ್ಲಾ ಬಕ್ರೀದ್ EId-ul-Adha ಹಬ್ಬದ ಶುಭಾಶಯಗಳು. ನಿಮಗೆಲ್ಲಾ ಆರೋಗ್ಯ..ಸುಖ..ಸಮೃದ್ಧಿ ಇರಲಿ..ಹಾಗೆ ನಮಗೆ ಬಿರಿಯಾನಿ ಬರಲಿ" ಎಂದು ವಿಶ್ ಮಾಡಿದ್ದಾರೆ.