Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ
Recommended Video
ಇತ್ತೀಚಿಗಷ್ಟೆ ಸಚಿವ ಪುಟ್ಟರಾಜು ಅವರ ಮನೆ ಹಾಗೂ ಕೆಲವು ಗುತ್ತಿಗೆದಾರರ ಕಚೇರಿ ಮೇಲೆ ಐಟಿ ರೈಡ್ ಆಗಿತ್ತು. ಈಗ, ದರ್ಶನ್ ಅವರ ಫಾರ್ಮ್ ಹೌಸ್ ಮೇಲೂ ಕೂಡ ಕೆಲವು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಆರಂಭದಲ್ಲಿ ಐಟಿ ರೈಡ್ ಎಂದು ಹೇಳಲಾಗಿತ್ತಾದರೂ, ಅವರು ಐಟಿ ಅಧಿಕಾರಿಗಳಲ್ಲ, ಚುನಾವಣೆ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ದರ್ಶನ್ ಅವರೇ ಮಾತನಾಡಿದ್ದು, ''ಐಟಿ ರೈಡ್ ಆಗಿಲ್ಲ, ಚುನಾವಣೆ ಅಧಿಕಾರಿಗಳು ಬಂದಿದ್ದರಂತೆ. ನಾನು ಪ್ರಚಾರದಲ್ಲಿದ್ದೇನೆ. ದುಡ್ಡು ಹಂಚುತ್ತಿದ್ದಾರೆ ಎಂಬ ದೂರು ಹೋಗಿರಬಹುದು. ಅದಕ್ಕೆ ಬಂದಿರುತ್ತಾರೆ. ಅಲ್ಲಿ ಏನೂ ಇಲ್ಲ. ಪ್ರಾಣಿಗಳಿಗೆ ತಿಂಡಿ, ಬೂಸಾ ಇದೆ'' ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಕೊನೆ ದಿನದ ಪ್ರಚಾರದಲ್ಲಿ ರಜನಿಕಾಂತ್?
ಇದೇ ಸಂಧರ್ಭದಲ್ಲಿ ಮಾತನಾಡಿದ ದರ್ಶನ್ 'ಐಟಿಗೆ ಸಂಬಂಧಪಟ್ಟಂತೆ ನಾನು ಎಲ್ಲ ತೆರಿಗೆಯನ್ನ ಪಾವತಿಸಿದ್ದೇನೆ. ಅದರ ಬಗ್ಗೆ ನನಗೆ ಆತಂಕವಿಲ್ಲ' ಎಂದು ತಿಳಿಸಿದ್ದಾರೆ.
ಅಂದ್ಹಾಗೆ, ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ದರ್ಶನ್ ಅವರ ಫಾರ್ಮ್ ಹೌಸ್ ಇದ್ದು, ಓರ್ವ ಪೊಲೀಸ್ ಪೇದೆ ಜೊತೆ ಇಬ್ಬರು ಅಧಿಕಾರಿಗಳು ಬಂದಿದ್ದರಂತೆ. ಕೇವಲ ಅರ್ಧಗಂಟೆಯಲ್ಲೇ ಪರಿಶೀಲನೆ ನಡೆಸಿ, ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿದ್ದು, ಕಳೆದ ಹದಿನೈದು ದಿನಗಳಿಂದ ಮಂಡ್ಯದಲ್ಲಿ ಸತತವಾಗಿ ಮತಯಾಚನೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿರಬಹುದು.