Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ
Recommended Video
ಇತ್ತೀಚಿಗಷ್ಟೆ ಸಚಿವ ಪುಟ್ಟರಾಜು ಅವರ ಮನೆ ಹಾಗೂ ಕೆಲವು ಗುತ್ತಿಗೆದಾರರ ಕಚೇರಿ ಮೇಲೆ ಐಟಿ ರೈಡ್ ಆಗಿತ್ತು. ಈಗ, ದರ್ಶನ್ ಅವರ ಫಾರ್ಮ್ ಹೌಸ್ ಮೇಲೂ ಕೂಡ ಕೆಲವು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಆರಂಭದಲ್ಲಿ ಐಟಿ ರೈಡ್ ಎಂದು ಹೇಳಲಾಗಿತ್ತಾದರೂ, ಅವರು ಐಟಿ ಅಧಿಕಾರಿಗಳಲ್ಲ, ಚುನಾವಣೆ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ದರ್ಶನ್ ಅವರೇ ಮಾತನಾಡಿದ್ದು, ''ಐಟಿ ರೈಡ್ ಆಗಿಲ್ಲ, ಚುನಾವಣೆ ಅಧಿಕಾರಿಗಳು ಬಂದಿದ್ದರಂತೆ. ನಾನು ಪ್ರಚಾರದಲ್ಲಿದ್ದೇನೆ. ದುಡ್ಡು ಹಂಚುತ್ತಿದ್ದಾರೆ ಎಂಬ ದೂರು ಹೋಗಿರಬಹುದು. ಅದಕ್ಕೆ ಬಂದಿರುತ್ತಾರೆ. ಅಲ್ಲಿ ಏನೂ ಇಲ್ಲ. ಪ್ರಾಣಿಗಳಿಗೆ ತಿಂಡಿ, ಬೂಸಾ ಇದೆ'' ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಕೊನೆ ದಿನದ ಪ್ರಚಾರದಲ್ಲಿ ರಜನಿಕಾಂತ್?
ಇದೇ ಸಂಧರ್ಭದಲ್ಲಿ ಮಾತನಾಡಿದ ದರ್ಶನ್ 'ಐಟಿಗೆ ಸಂಬಂಧಪಟ್ಟಂತೆ ನಾನು ಎಲ್ಲ ತೆರಿಗೆಯನ್ನ ಪಾವತಿಸಿದ್ದೇನೆ. ಅದರ ಬಗ್ಗೆ ನನಗೆ ಆತಂಕವಿಲ್ಲ' ಎಂದು ತಿಳಿಸಿದ್ದಾರೆ.
ಅಂದ್ಹಾಗೆ, ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ದರ್ಶನ್ ಅವರ ಫಾರ್ಮ್ ಹೌಸ್ ಇದ್ದು, ಓರ್ವ ಪೊಲೀಸ್ ಪೇದೆ ಜೊತೆ ಇಬ್ಬರು ಅಧಿಕಾರಿಗಳು ಬಂದಿದ್ದರಂತೆ. ಕೇವಲ ಅರ್ಧಗಂಟೆಯಲ್ಲೇ ಪರಿಶೀಲನೆ ನಡೆಸಿ, ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿದ್ದು, ಕಳೆದ ಹದಿನೈದು ದಿನಗಳಿಂದ ಮಂಡ್ಯದಲ್ಲಿ ಸತತವಾಗಿ ಮತಯಾಚನೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿರಬಹುದು.