Don't Miss!
- News ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ, ಪರದಾಟ ನೋಡಲು ಆಗುತ್ತಿಲ್ಲ!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾ ಶುಭಾರಂಭ
ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ (ಡಿಸೆಂಬರ್ 14) ನಡೆದಿದೆ. ಪದ್ಮನಾಭನಗರ ಸಿನಿಮಾದ ಸಾಯಿ ಬಾಬಾ ದೇವಸ್ಥಾನದಲ್ಲಿ ಸಿನಿಮಾ ಶುಭರಂಭವಾಗಿದೆ.
ಇಡೀ ಚಿತ್ರತಂಡ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಾಶಯ ತಿಳಿಸಿದರು. ದೇವರ ಸನ್ನಿಧಿಯಲ್ಲಿ ಮೊದಲ ಶಾಟ್ ಚಿತ್ರೀಕರಣ ಆಯಿತು.
ಕಾರ್ಯಕ್ರಮದಲ್ಲಿ ನಾಯಕ, ನಾಯಕಿ, ನಿರ್ದೇಶಕ ಕಿರಣ್ ಸೂರ್ಯ, ನಿರ್ಮಾಪಕರಾದ ನಂದೀಶ್ ಗೌಡ ಮತ್ತು ಜಿತಿನ್ ಜಿ ಪಟೇಲ್ ಹಾಗೂ 'ಮಮ್ಮಿ', 'ದೇವಕಿ' ಸಿನಿಮಾಗಳ ನಿರ್ದೇಶಕ ಲೋಹಿತ್ ಹಾಜರಿದ್ದರು.
ಡಿಸೆಂಬರ್ 26 ರಿಂದ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಮೈಸೂರು, ಮಡಿಕೇರಿ ಭಾಗಗಳಲ್ಲಿ ಶೂಟಿಂಗ್ ಮಾಡುವ ಪ್ಲಾನ್ ಇದೆ. ಈಗಾಗಲೇ ಹಾಡಿನ ರೆಕಾರ್ಡಿಂಗ್ ಕೆಲಸಗಳು ಶುರು ಆಗಿವೆ. ಜನವರಿ ತಿಂಗಳಿನಲ್ಲಿ ಅಭಿಮನ್ಯು ಫಸ್ಟ್ ಲುಕ್ ಹೊರಬರಲಿದೆ. ಎಂದು ಕಿರಣ್ ತಿಳಿಸಿದ್ದಾರೆ.
ಸುದರ್ಶನ ಆರ್ಟ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅಭಿಮನ್ಯು ಜೋಡಿಯಾಗಿ ಸ್ಫೂರ್ತಿ ಉಡಿಮನೆ ಹಾಗೂ ವಿಜಯ ಶ್ರೀ ನಾಯಕಿಯರಾಗಿದ್ದಾರೆ. 7 ವರ್ಷಗಳ ನಂತರ ಕಾಶೀನಾಥ್ ಮಗ ಕಮ್ ಬ್ಯಾಕ್ ಮಾಡಿದ್ದಾರೆ.
ಸಿನಿಮಾದ ಪೋಸ್ಟರ್ ಈಗಾಗಲೇ ಗಮನ ಸೆಳೆದಿದೆ. ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಚಿತ್ರರಂಗದ ಅನೇಕರು ಪೋಸ್ಟರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.