Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದಿಲ್ಲದೆ ಇಂದು ಅಣ್ಣಾವ್ರ ಸಿನಿಮಾ ರೀ ರಿಲೀಸ್ ಆಗ್ತಿದೆ
Recommended Video
ನಟ ವಿಷ್ಣುವರ್ಧನ್ ನಂತರ ಈಗ ರಾಜ್ ಕುಮಾರ್ ಗಾಂಧಿನಗರಕ್ಕೆ ಆಗಮಿಸಿದ್ದಾರೆ. 'ನಾಗರಹಾವು' ಸಿನಿಮಾದ ಮರು ಬಿಡುಗಡೆಯ ಬಳಿಕ ಈಗ ಅಣ್ಣಾವ್ರ 'ಎರಡು ಕನಸು' ಸಿನಿಮಾ ರೀ ರಿಲೀಸ್ ಆಗುತ್ತಿದೆ.
ಹೆಚ್ಚು ಪ್ರಚಾರ ಮಾಡದ ಕಾರಣ ಈ ಸಿನಿಮಾದ ಬಿಡುಗಡೆಯ ವಿಚಾರ ಅನೇಕರಿಗೆ ತಿಳಿದಿಲ್ಲ. ಆದರೆ, ಸದ್ದಿಲ್ಲದೆ 'ಎರಡು ಕನಸು' ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ನಾಲ್ಕು ಆಟಗಳು ಸಿನಿಮಾ ಪ್ರದರ್ಶನ ಆಗುತ್ತಿದೆ.
ಮತ್ತೆ ಗಾಂಧಿನಗರದ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ'
ತ್ರಿವೇಣಿಯ ಜೊತೆಗೆ ರಾಜ್ಯದ 40ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಇಂದು ರಿಲೀಸ್ ಆಗುತ್ತಿರುವ ಮೂರು ಹೊಸ ಚಿತ್ರಗಳ ಜೊತೆಗೆ 'ಎರಡು ಕನಸು' ಮರು ಬಿಡುಗಡೆಯಾಗುತ್ತಿದೆ.
ಅಂದಹಾಗೆ, 'ಎರಡು ಕನಸು' ರಾಜ್ ಕುಮಾರ್ ಅವರ ಸಿನಿ ಜರ್ನಿಯ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 1974ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವನ್ನು ದೊರೈ ಭಗವಾನ್ ನಿರ್ದೇಶನ ಮಾಡಿದ್ದರು. ರಾಜ್ ಜೊತೆಗೆ ಮಂಜುಳ ಹಾಗೂ ಕಲ್ಪನಾ ನಟಿಸಿದ್ದರು.