Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದಿಲ್ಲದೆ ಇಂದು ಅಣ್ಣಾವ್ರ ಸಿನಿಮಾ ರೀ ರಿಲೀಸ್ ಆಗ್ತಿದೆ
Recommended Video
ನಟ ವಿಷ್ಣುವರ್ಧನ್ ನಂತರ ಈಗ ರಾಜ್ ಕುಮಾರ್ ಗಾಂಧಿನಗರಕ್ಕೆ ಆಗಮಿಸಿದ್ದಾರೆ. 'ನಾಗರಹಾವು' ಸಿನಿಮಾದ ಮರು ಬಿಡುಗಡೆಯ ಬಳಿಕ ಈಗ ಅಣ್ಣಾವ್ರ 'ಎರಡು ಕನಸು' ಸಿನಿಮಾ ರೀ ರಿಲೀಸ್ ಆಗುತ್ತಿದೆ.
ಹೆಚ್ಚು ಪ್ರಚಾರ ಮಾಡದ ಕಾರಣ ಈ ಸಿನಿಮಾದ ಬಿಡುಗಡೆಯ ವಿಚಾರ ಅನೇಕರಿಗೆ ತಿಳಿದಿಲ್ಲ. ಆದರೆ, ಸದ್ದಿಲ್ಲದೆ 'ಎರಡು ಕನಸು' ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ನಾಲ್ಕು ಆಟಗಳು ಸಿನಿಮಾ ಪ್ರದರ್ಶನ ಆಗುತ್ತಿದೆ.
ಮತ್ತೆ ಗಾಂಧಿನಗರದ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ'
ತ್ರಿವೇಣಿಯ ಜೊತೆಗೆ ರಾಜ್ಯದ 40ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಇಂದು ರಿಲೀಸ್ ಆಗುತ್ತಿರುವ ಮೂರು ಹೊಸ ಚಿತ್ರಗಳ ಜೊತೆಗೆ 'ಎರಡು ಕನಸು' ಮರು ಬಿಡುಗಡೆಯಾಗುತ್ತಿದೆ.
ಅಂದಹಾಗೆ, 'ಎರಡು ಕನಸು' ರಾಜ್ ಕುಮಾರ್ ಅವರ ಸಿನಿ ಜರ್ನಿಯ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 1974ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವನ್ನು ದೊರೈ ಭಗವಾನ್ ನಿರ್ದೇಶನ ಮಾಡಿದ್ದರು. ರಾಜ್ ಜೊತೆಗೆ ಮಂಜುಳ ಹಾಗೂ ಕಲ್ಪನಾ ನಟಿಸಿದ್ದರು.