Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ ಭಾರತ್ ಬಂದ್ : ಗೊಂದಲದಲ್ಲಿರುವ ಚಿತ್ರರಂಗ
ತೈಲ ಉತ್ಪನ್ನಗಳ ಬೆಲೆಗಳನ್ನು ಕೇಂದ್ರ ಸರಕಾರ ಹೆಚ್ಚಿಸುತ್ತಿರುವುದನ್ನು ವಿರೋಧಿಸಿ ಸೋಮವಾರ (ಸೆ 10) ಭಾರತ್ ಬಂದ್ ಗೆ ಕರೆನೀಡಾಗಿದೆ. ಬಂದ್ ನ ಬಿಸಿ ನಾಳೆ ಬೆಳ್ಳಂ ಬೆಳ್ಳಿಗ್ಗೆ ಎಲ್ಲಾ ಕ್ಷೇತ್ರಗಳಿಗೆ ಮುಟ್ಟಲಿದ್ದು ಕನ್ನಡ ಚಿತ್ರೋದ್ಯಮಕ್ಕೆ ಈ ಬಿಸಿ ಇರುತ್ತಾ? ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ.
ಆದರೆ ಬಂದ್ ಗೆ ಬೆಂಬಲ ನೀಡಬೇಕೇ ಅಥವಾ ಬೇಡವೇ ಎನ್ನುವ ಗೊಂದಲದಲ್ಲಿದೆ ಕನ್ನಡ ಚಿತ್ರರಂಗ. ಹೌದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಾಳಿನ ಬಂದ್ ಗೆ ನೈತಿಕ ಬೆಂಬಲವಷ್ಟೇ ಇದೆ.
ಒಂದು ' ಭಾರತ್ ಬಂದ್' ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಹಾಗಿದ್ದರೆ!?
ಶಾರ್ಟ್ ನೋಟೀಸ್ ಆಗಿರೋದ್ರಿಂದ ಬಂದ್ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಎನ್ನುತ್ತಿದ್ದಾರೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಚಿನ್ನೇಗೌಡರು. ಇನ್ನು ನಾಳೆ ಸಿನಿಮಾ ಚಿತ್ರೀಕರಣ ನೆಡೆಯುತ್ತಾ? ಸಿನಿಮಾ ಪ್ರದರ್ಶನ ಇರುತ್ತಾ ಎನ್ನುವುದನ್ನ ಜನರೇ ನಿರ್ಧಾರ ಮಾಡಬೇಕಿದೆ.
ಯಾಕಂದ್ರೆ ಚಿತ್ರಮಂದಿರಕ್ಕೆ ಜನರು ಬಂದರೆ ಪ್ರದರ್ಶನ ಮಾಡುವುದು ನಮ್ಮ ಧರ್ಮ. ಜನರು ಬರದೇ ಮನೆಯಲ್ಲಿ ಉಳಿದರೇ ನೋ ಷೋ ಅಂತ ಬೋರ್ಡ್ ಹಾಕಲು ಥಿಯೇಟರ್ ಮಾಲೀಕರು ನಿರ್ಧಾರ ಮಾಡಿದ್ದಾರೆ. ಇನ್ನು ಔಟ್ ಡೋರ್ ಚಿತ್ರೀಕರಣ ಎಂದಿನಂತೆ ನಡೆಯುತ್ತಾ ಇಲ್ಲವಾ? ಎನ್ನುವ ಪ್ರಶ್ನೆಗೆ ಉತ್ತರ ನಾಳಿನ ಬಂದ್ ಪರಿಣಾಮ ಹೇಗಿರುತ್ತೆ ಎನ್ನುವುದರ ಮೇಲೆ ನಿರ್ಧಾರವಾಗಲಿದೆ.