Don't Miss!
- Sports
IND vs NZ 2nd T20: ಭಾರತ vs ನ್ಯೂಜಿಲೆಂಡ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- News
ಫೇಸ್ಬುಕ್ ಪ್ರೀತಿ: ಉತ್ತರ ಪ್ರದೇಶದ ಯುವಕನನ್ನು ಮದುವೆಯಾಗಲು ಸ್ವೀಡನ್ನಿಂದ ಬಂದ ಯುವತಿ
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಥೆಯನ್ನು ಯಾರು ಕೇಳಿ ಒಪ್ಪಿಕೊಂಡ ನಂತರ ದರ್ಶನ್ ನಟಿಸಲು ಒಪ್ಪಿಕೊಳ್ತಾರೆ? ಇಂಥ ಕಥೆ ಮಾತ್ರ ಬೇಡ ಅಂತಾರೆ ದರ್ಶನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗದಲ್ಲಿ ಇಪ್ಪತ್ತೈದು ವರ್ಷಗಳನ್ನು ಪೂರೈಸಿದ್ದಾರೆ. ಲೈಟ್ ಬಾಯ್ ಆಗಿ ಕೆಲಸ ಆರಂಭಿಸಿ ಪೋಷಕ ಪಾತ್ರಗಳಿಗಾಗಿ ಬಣ್ಣ ಹಚ್ಚಲು ಆರಂಭಿಸಿದ ನಟ ದರ್ಶನ್ ಸದ್ಯ ಬಾಕ್ಸ್ ಆಫೀಸ್ ಸುಲ್ತಾನನಾಗಿದ್ದಾರೆ ಹಾಗೂ ಚಾಲೆಂಜಿಂಗ್ ಸ್ಟಾರ್ ಆಗಿ ಕನ್ನಡ ಚಿತ್ರರಂಗದ ಅತಿಮುಖ್ಯ ನಟ ಎನಿಸಿಕೊಂಡಿದ್ದಾರೆ. ಹೀಗೆ ಕಷ್ಟದ ಹಾದಿಯಲ್ಲಿ ಬೆಳೆದು ಬಂದ ದರ್ಶನ್ ಸದ್ಯ ತನ್ನ 55ನೇ ಚಿತ್ರವಾದ ಕ್ರಾಂತಿ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಹೌದು, ಈ ಬಾರಿ ತಮ್ಮ ಚಿತ್ರದ ಪ್ರಚಾರಕ್ಕಾಗಿ ದರ್ಶನ್ ಸ್ವತಃ ಸಂದರ್ಶನಗಳಲ್ಲಿ ಭಾಗವಹಿಸಿದ್ದು ಸಂದರ್ಶಕರು ಕೇಳುವ ಭಿನ್ನ ವಿಭಿನ್ನ ಪ್ರಶ್ನೆಗಳಿಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ಕ್ರಾಂತಿ ಚಿತ್ರದ ಕುರಿತಾಗಿ ಮಾತ್ರವಲ್ಲದೇ ತಮ್ಮ ಹಲವು ವೈಯಕ್ತಿಕ ವಿಚಾರ ಹಾಗೂ ತಮ್ಮ ಸಿನಿ ಜರ್ನಿಯ ಬಗ್ಗೆ ಕೂಡ ದರ್ಶನ್ ಹೇಳಿಕೊಂಡಿದ್ದಾರೆ.
ಬಾಯ್ತಪ್ಪಿ
'ಕ್ರಾಂತಿ'
ಸಿನಿಮಾ
ಬಜೆಟ್
ಎಷ್ಟು
ಎಂದು
ಹೇಳಿಬಿಟ್ಟರು
ಚಾಲೆಂಜಿಂಗ್
ಸ್ಟಾರ್
ದರ್ಶನ್!
ಇನ್ನು ದರ್ಶನ್ ನಟಿಸುವ ಚಿತ್ರದ ಕತೆಯನ್ನು ಯಾರು ಕೇಳಿ ಕತೆ ಚೆನ್ನಾಗಿದೆ ನಟಿಸಬಹುದು ಎಂಬ ಸಲಹೆಯನ್ನು ದರ್ಶನ್ ಅವರಿಗೆ ಯಾರು ನೀಡಬಹುದು ಎಂಬ ಪ್ರಶ್ನೆ ಹಲವು ಅಭಿಮಾನಿಗಳು ಹಾಗೂ ಸಿನಿ ರಸಿಕರಲ್ಲಿ ಇತ್ತು. ಈ ಪ್ರಶ್ನೆಗೆ ಈಗ ನಟ ದರ್ಶನ್ ಯುಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ಉತ್ತರಿಸಿದ್ದಾರೆ.

ಕತೆಯನ್ನು ಯಾರು ಕೇಳಿ ಓಕೆ ಮಾಡ್ತಾರೆ?
ಕನ್ನಡ ಪಿಚ್ಚರ್ ಎಂಬ ಯುಟ್ಯೂಬ್ ಚಾನೆಲ್ ನಡೆಸಿದ ಕ್ರಾಂತಿ ಚಿತ್ರದ ಕುರಿತಾದ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್ ಅವರಿಗೆ ನಿಮಗೆ ನಿರ್ದೇಶಕರು ಕತೆ ಹೇಳಲು ಬಂದಾಗ ಆ ಕತೆಯನ್ನು ನಿಮ್ಮನ್ನು ಬಿಟ್ಟು ಬೇರೆ ಯಾರಾದರೂ ಕೇಳ್ತಾರಾ ಎಂಬ ಪ್ರಶ್ನೆ ಎದುರಾಯಿತು. ಈ ಪ್ರಶ್ನೆಗೆ ಉತ್ತರಿಸಿದ ದರ್ಶನ್ ಕತೆಯನ್ನು ಕೇಳಿ ಒಪ್ಪಿಕೊಳ್ಳುವುದು ತಾನು ಮಾತ್ರ, ಬೇರೆ ಯಾರೂ ಸಹ ಇದಕ್ಕೆ ತಲೆ ಹಾಕುವುದಿಲ್ಲ, ತನಗೆ ಕತೆ ಇಷ್ಟ ಆದರೆ ಚಿತ್ರದಲ್ಲಿ ನಟಿಸುವುದಷ್ಟೇ ಎಂದು ಹೇಳಿಕೆ ನೀಡಿದರು.

ಇಂಥ ಕತೆ ಮಾತ್ರ ಬೇಡ!
ಇನ್ನೂ ಮುಂದುವರಿದು ಮಾತನಾಡಿದ ದರ್ಶನ್ ನಿರ್ದೇಶಕರಿಗೆ ನಮ್ಮ ಸುತ್ತ ಮುತ್ತ ನಡೆಯೋದನ್ನು ನೋಡ್ತಾ ಇರಿ, ಬೇರೆ ಎಲ್ಲಿಂದಾನೋ ಏನನ್ನೋ ತಂದು ಮಾಡ್ತೀನಿ ಅನ್ನೋದೆಲ್ಲ ಬೇಡ, ನಮ್ಮ ಸುತ್ತಮುತ್ತ ಏನು ಸಮಸ್ಯೆ ಇದೆಯೋ ಅದನ್ನು ತೋರಿಸುವಂತ ಕತೆ ತನ್ನಿ ಮಾಡೋಣ ಅಂತ ಹೇಳ್ತಾ ಇರ್ತೀನಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದರು.

ಹರಿಕೃಷ್ಣಗೆ ಎಂಥ ಚಿತ್ರ ಮಾಡಬೇಕೆಂಬುದು ಗೊತ್ತಿದೆ
ಇದೇ ಸಮಯದಲ್ಲಿ ಹರಿಕೃಷ್ಣ ಕುರಿತು ವಿಶೇಷವಾಗಿ ಮಾತನಾಡಿದ ದರ್ಶನ್ ಕೇವಲ ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ನಿರ್ದೇಶಕನಾಗಿಯೂ ಸಹ ಹರಿಕೃಷ್ಣ ಪ್ರತಿಭಾವಂತ ಅವರಿಗೆ ಎಂಥ ಚಿತ್ರ ಮಾಡಬೇಕು ಎಂಬುದು ಸ್ಪಷ್ಟವಾಗಿ ತಿಳಿದಿದೆ, ಕ್ರಾಂತಿ ಚಿತ್ರ ಸರ್ಕಾರಿ ಶಾಲೆಯ ಕುರಿತಾಗಿ ಇರಲಿದೆ ಎಂದ ಕೂಡಲೇ ಈ ಚಿತ್ರ ಮಾಡೋಣ ಎಂದು ಒಪ್ಪಿಕೊಂಡಿದ್ದೆ ಎಂದು ದರ್ಶನ್ ತಿಳಿಸಿದರು.