Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹೆಸರಿನಲ್ಲಿ ಸಿಎಂ ಕುಮಾರಸ್ವಾಮಿಗೆ ಅವಹೇಳನ
Recommended Video
ಸಾಮಾಜಿಕ ಜಾಲತಾಣಗಳು ಎಷ್ಟು ಒಳ್ಳೆಯದೋ ಅಷ್ಟೆ ಕೆಟ್ಟದ್ದು. ಸೋಷಿಯಲ್ ಮೀಡಿಯಾವನ್ನು ಅನೇಕರು ದುರ್ಬಳಕೆ ಮಾಡುವ ಘಟನೆಗಳು ಪದೇ ಪದೇ ನಡೆಯುತ್ತಿದೆ. ಈಗ ನಟ ದರ್ಶನ್ ಅವರ ಹೆಸರಿನಲ್ಲಿ ಸಿಎಂ ಕುಮಾರಸ್ವಾಮಿಗೆ ಅವಹೇಳನ ಮಾಡಲಾಗಿದೆ.
ಕಿಡಿಗೇಡಿಗಳು ನಟ ದರ್ಶನ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ. ಆ ಖಾತೆಯ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಸರಣಿ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಕುಮಾರಸ್ವಾಮಿ ಬಗ್ಗೆ ಕೆಟ್ಟದಾಗಿ ಬರೆದು, ಅವರ ಫೋಟೋಗಳನ್ನು ವಿಕೃತವಾಗಿ ಬಿಂಬಿಸುತ್ತಿದ್ದರು. ಇದನ್ನು ಗಮನಿಸಿದ ಕುಮಾರಸ್ವಾಮಿ ಅಭಿಮಾನಿ ಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೋಟೆಲ್ ಸೆಕ್ಯೂರಿಟಿಗೆ ಗೌರವ ನೀಡಿದ ದಾಸನ ದೊಡ್ಡತನಕ್ಕೆ ಮೆಚ್ಚುಗೆ
ಜೊತೆಗೆ ದರ್ಶನ್ ಹೆಸರಿನ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಅವಹೇಳನ ಮಾಡಿದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ರಿಗೆ ದೂರು ಕೊಟ್ಟಿದ್ದಾರೆ. ದೂರು ಸ್ವೀಕರಿಸಿದ ಸುನೀಲ್ ಕುಮಾರ್ ಫೇಸ್ ಬುಕ್ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈ ಕೊಳ್ಳುವುದಾಗಿ ಹೇಳಿದ್ದಾರೆ.